ಶುಕ್ರವಾರ, ಜುಲೈ 28, 2023

ಭಾನುವಾರ (ಜುಲೈ 30) ಕೊಟ್ಟಿಗೆಹಾರ (ಅತ್ತಿಗೆರೆ)ಯಲ್ಲಿ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ

   ಕೊಟ್ಟಿಗೆಹಾರ: ಚಿಕ್ಕಮಗಳೂರಿನ ಸ್ವಾಭಿಮಾನಿ ಪತ್ರಕರ್ತರ ಜನಪರ ವೇದಿಕೆ 'ಪಬ್ಲಿಕ್ ಇಂಪಾಕ್ಟ್ ' ಖಾಸಗಿ ವಾಹಿನಿ  ವತಿಯಿಂದ ಕೊಟ್ಟಿಗೆಹಾರದ ಅತ್ತಿಗೆರೆಯ ಎ.ಎಸ್.ಅಶ್ವತ್ಥ್ ಅವರ ಗದ್ದೆಯಲ್ಲಿ ರಾಜ್ಯಮಟ್ಟದ ಕೆಸರು ಗದ್ದೆ ಕ್ರೀಡಾಕೂಟ ಏರ್ಪಡಿಸಲಾಗಿದೆ.
ಪುರುಷರ ಹಗ್ಗಜಗ್ಗಾಟ ಪ್ರಥಮ 10ಸಾವಿರ,ದ್ವಿತೀಯ 5ಸಾವಿರ, ತೃತೀಯ 3ಸಾವಿರ ಹಾಗೂ  ಮಹಿಳೆಯರ ಹಗ್ಗಜಗ್ಗಾಟ ಪ್ರಥಮ ಕ್ರಮವಾಗಿ 10ಸಾವಿರ,5ಸಾವಿರ, 3ಸಾವಿರ ಪುರುಷರ ವಾಲಿಬಾಲ್ ಸ್ಪರ್ಧೆಯಲ್ಲಿ  ಕ್ರಮವಾಗಿ 5ಸಾವಿರ,3ಸಾವಿರ,2ಸಾವಿರ ಮತ್ತು  ಮಹಿಳೆಯರ ಥ್ರೋಬಾಲ್ 5ಸಾವಿರ,3ಸಾವಿರ ಹಾಗೂ 2 ಸಾವಿರ.ನೂರು ಮೀಟರ್ ಓಟದ ಸ್ಪರ್ಧೆಯಲ್ಲಿ 1ಸಾವಿರ, 500ಹಾಗೂ ತೃತೀಯ 300ರೂ ಬಹುಮಾನ ನೀಡಲಾಗುವುದು.ಆಸಕ್ತರು ಮೊಬೈಲ್ ಸಂಖ್ಯೆ  9148055429/9916917520 ಕರೆ ಮಾಡಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಆಯೋಜಕರಾದ ಪ್ರಶಾಂತ್ ಮೂಡಿಗೆರೆ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಸೋಮವಾರ, ಜುಲೈ 10, 2023

ನೂತನ ಮುಖ್ಯ ಪಶು ವೈದ್ಯಾಧಿಕಾರಿಯಾಗಿ ಡಾ.ರಮೇಶ್ ಸಿ ನೇಮಕ

ಕೊಟ್ಟಿಗೆಹಾರ:ಮೂಡಿಗೆರೆ ಪಶು ಆಸ್ಪತ್ರೆಯ ನೂತನ ಮುಖ್ಯ ಪಶು ವೈದ್ಯಾಧಿಕಾರಿಯಾಗಿ ಡಾ. ರಮೇಶ್ ಸಿ ನೇಮಕಗೊಂಡಿದ್ದಾರೆ. 
ಈ ಹಿಂದೆ ಚಿಕ್ಕಮಗಳೂರು ತಾಲ್ಲೂಕಿನ ಕೆಳಗೂರು ಪಶು ಚಿಕಿತ್ಸಾಲಯದಲ್ಲಿ ಮುಖ್ಯ ಪಶು ವೈದ್ಯಾಧಿಕಾರಿಗಳಾಗಿದ್ದ ಡಾ. ರಮೇಶ್ ಸಿ ಅವರನ್ನು ಮೂಡಿಗೆರೆ ಪಶು ಆಸ್ಪತ್ರೆಗೆ ಮುಖ್ಯ ಪಶು ವೈದ್ಯಾಧಿಕಾರಿಯಾಗಿ ವರ್ಗಾವಣೆ ಮಾಡಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪ ನಿರ್ದೆಶಕರು ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಮೂಡಿಗೆರೆ ಪಶು ಆಸ್ಪತ್ರೆಯಲ್ಲಿ ಪ್ರಭಾರ ಮುಖ್ಯ ಪಶು ವೈದ್ಯಾಧಿಕಾರಿಯಾಗಿದ್ದ ಡಾ.ಮನು ಅವರಿಂದ  ಡಾ. ರಮೇಶ್ ಸಿ ಅವರು ಅಧಿಕಾರ ಸ್ವೀಕರಿಸಿದರು.