ಭಾನುವಾರ, ನವೆಂಬರ್ 5, 2023

ಶೆಟಲ್ ಬ್ಯಾಡ್ಮಿಂಟನ್‌ನಲ್ಲಿ ಭಾರತಿಬೈಲ್ ನ ರಾಜೇಶ್ ಬಿ.ಆರ್ ಗೆ ಪ್ರಥಮ ಸ್ಥಾನ

ಕೊಟ್ಟಿಗೆಹಾರ:ಮೈಸೂರಿನ ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ನಡೆದ ೪೪ನೇ ರಾಜ್ಯಮಟ್ಟದ ಅಂತರ ಪಾಲಿಟೆಕ್ನಿಕ್ ಕ್ರೀಡಾಕೂಟದಲ್ಲಿ ನಡೆದ  ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ  ಮೂಡಿಗೆರೆ ತಾಲ್ಲೂಕಿನ  ಭಾರತಿಬೈಲ್‌ನ ರಾಜೇಶ್ ಬಿ ಆರ್ ಪ್ರಥಮ ಸ್ಥಾನ ಪಡೆದು ರಾಷ್ಟçಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ಸಿ ಪಿ ಸಿ ಪಾಲಿಟೆಕ್ನಿಕ್ ಮೈಸೂರು, ಇವರ ವತಿಯಿಂದ ನಡೆದ  ೪೪ನೇ ರಾಜ್ಯಮಟ್ಟದ ಅಂತರ ಪಾಲಿಟೆಕ್ನಿಕ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ  ಮೂಡಿಗೆರೆ ತಾಲ್ಲೂಕಿನ  ಭಾರತಿಬೈಲ್‌ನ ರಾಜೇಶ್ ಬಿ ಆರ್ ಮತ್ತು ಉಡುಪಿಯ ದರ್ಶನ್ ಸಿ ಅಂಬಲ್ಪಡಿ ಭಾಗವಹಿಸಿದ್ದು ಪ್ರಥಮ ಸ್ಥಾನ ಪಡೆಯುವ ಮೂಲಕ ರಾಷ್ಟçಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ವಿದ್ಯಾರ್ಥಿಗಳೊಂದಿಗೆ ಪಾಲಿಟೆಕ್ನಿಕ್ ಉಡುಪಿ ಕಾಲೇಜಿನ ಪ್ರಾಂಶುಪಾಲರಾದ ಉಮಾ ಬಿ ಮತ್ತು ಕ್ರೀಡಾ ಯೋಜನಾಧಿಕಾರಿಳಾದ ಮಧು ಎಂಜಿ ಇದ್ದರು. ಮೂಡಿಗೆರೆ ತಾಲ್ಲೂಕಿನ ಭಾರತಿಬೈಲ್‌ನ ರಾಜೇಶ್ ಬಿ ಆರ್, ಉಡುಪಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮೊ ವ್ಯಾಸಂಗ ಮಾಡುತ್ತಿದ್ದಾರೆ. ರಾಜೇಶ್ ಬಿ.ಆರ್ ಭಾರತಿಬೈಲ್‌ನ ರಾಮಚಂದ್ರ ಮತ್ತು ಸರೋಜ ದಂಪತಿಗಳ ಪುತ್ರ.
ಇದೇ ಕ್ರೀಡಾಕೂಟದಲ್ಲಿ  ಸರ್ಕಾರಿ ಪಾಲಿಟೆಕ್ನಿಕ್ ಉಡುಪಿ ಕಾಲೇಜಿನ ವಿದ್ಯಾರ್ಥಿಗಳಾದ .ಸಾಕ್ಷಿತ್ ದೇವಾಡಿಗ ಕಾಪು ಉಡುಪಿ, ಸುಚಿತ್ ಕುಂದಾಪುರ, ಕಾರ್ತಿಕ್ ಶೆಟ್ಟಿಗಾರ್, ಸಂದೀಪ್ ಎಚ್ ಎಂ, ಶ್ರೀ ಜಿ ಆಚಾರ್ಯ ಕುಂದಾಪುರ, ಸನಾತ್ ಆಚಾರ್ಯ ಕಾಪು, ವಿನಯ್ ಕುಮಾರ್, ಆದಿತ್ಯ ಉಡುಪಿ ವಾಲಿಬಾಲ್ ಪಂದ್ಯದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಬುಧವಾರ, ನವೆಂಬರ್ 1, 2023

ಡಾ.ಎಚ್.ಎಸ್. ಸತ್ಯನಾರಾಯಣ ಅವರಿಗೆ ಕುವೆಂಪು ಸಾಹಿತ್ಯ ಪರಿಚಾರ ಪ್ರಶಸ್ತಿ

ಕೊಟ್ಟಿಗೆಹಾರ:ಸಿಎಂಜಿ ಪ್ರತಿಷ್ಠಾನದಿಂದ ೨೦೨೩ನೇ ಸಾಲಿನ ಕುವೆಂಪು ಸಾಹಿತ್ಯ ಪರಿಚಾರಕ ಪ್ರಶಸ್ತಿ ಪುರಸ್ಕಾರಕ್ಕೆ ವಿಮರ್ಶಕ ಹಾಗೂ ಸಾಹಿತಿ ಡಾ. ಎಚ್.ಎಸ್. ಸತ್ಯನಾರಾಯಣ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯೂ ೫೦ ಸಾವಿರ ನಗದು, ಸ್ಮರಣಿಕೆ ಫಲ ತಾಂಬೂಲಗಳನ್ನು ಒಳಗೊಂಡಿದ್ದು ಡಿಸೆಂಬರ್ ೨೯ ರಂದು ಶಿರಾದಲ್ಲಿ ನಡೆಯುವ ವಿಶ್ವಮಾನವ ದಿನದಂದು ಪ್ರಶಸ್ತಿ ಪ್ರಧಾನಗೊಳ್ಳಲಿದೆ. 
ಡಾ.ಎಚ್.ಎಸ್. ಸತ್ಯನಾರಾಯಣ ಅವರು ಹೊಸ ತಲೆಮಾರಿನ ಓದುಗರಿಗಾಗಿ ಕುವೆಂಪು ಅಲಕ್ಷಿತರೆದೆಯ  ದೀಪ ಎಂಬ ಕೃತಿಯನ್ನು ರಚಿಸಿದ್ದು ಹಲವಾರು ಸಂಪಾದಿತ ಕೃತಿಗಳು ಇವರ ಲೇಖನಿಯಿಂದ ಮೂಡಿ ಬಂದಿದೆ. ಅಪೂರ್ವ ಒಡನಾಟ, ಅಕ್ಷರ ಲೋಕದ ಆನೆ, ನುಡಿಚಿತ್ರ, ಕಣ್ಣೋಟ, ಪನ್ನೇರಳೆ ಇವರ ಪ್ರಕಟಿತ ಕೃತಿಗಳಾಗಿವೆ.