ಭಾನುವಾರ, ಏಪ್ರಿಲ್ 30, 2023

ಗ್ರಾಮದ ಜನರ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ:ನಯನ ಮೋಟಮ್ಮ

ಕೊಟ್ಟಿಗೆಹಾರ: ಕಾಂಗ್ರೆಸ್ ರಾಷ್ಟ್ರೀಯ ಪಕ್ಷಕ್ಕೆ ಬಹು ದೊಡ್ಡ ಇತಿಹಾಸವಿದೆ.ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಕಾಂಗ್ರೆಸ್.ದೇಶ ಕಟ್ಟಿದ ಹೆಗ್ಗಳಿಕೆ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ ಎಂದು ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಬಿ.ಬಿ.ನಿಂಗಯ್ಯ ಹೇಳಿದರು.
ಅವರು ಬಾಳೂರು ಹೋಬಳಿಯ ಬಾಳೂರು,ಜಾವಳಿ,ಕೂವೆ,ಕಲ್ಮನೆ,ಮಾಳಿಂಗನಾಡು,ಗಬ್ಗಲ್, ನಿಡುವಾಳೆ,ಸುಂಕಸಾಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಯನಾ ಮೋಟಮ್ಮ ಪರ ಮತಯಾಚನೆ ಮಾಡಿ ಮಾತನಾಡಿದರು.
ಮತದಾರರಿಗೆ ಸರಿಯಾಗಿ ವಿಮರ್ಶೆ ಮಾಡಿ ಮತದಾನ ಮಾಡಲು ಕಾಲಾವಕಾಶವಿದೆ.ರಸ್ತೆಗಳನ್ನು ಮಾಡಿದ್ದು ಕಾಂಗ್ರೆಸ್ ಪಕ್ಷ ಮೋದಿಯವರಲ್ಲ.ನಂತರ ಅವರ ಕಾಲದಲ್ಲಿ ಡಾಂಬರೀಕರಣ ಆಗಿರಬಹುದು.ಹಿರಿಯ ನಾಯಕಿ ಮೋಟಮ್ಮ ಮೂಡಿಗೆರೆ ಕ್ಷೇತ್ರದಲ್ಲಿ ಮೂರು ಬಾರಿ ಚುನಾವಣೆಯಲ್ಲಿ ಗೆದ್ದು ಕ್ಷೇತ್ರದಲ್ಲಿ ಸಾಕಷ್ಟು ಗರಿಷ್ಟ ಕೆಲಸವನ್ನು ಮಾಡಿದ್ದಾರೆ.ಅವರ ಪುತ್ರಿ ನಯನಾ ಕೂಡ ಶಿಕ್ಷಿತರಾಗಿದ್ದು  ಕ್ಷೇತ್ರವನ್ನು ಅಬಿವೃದ್ಧಿ ಪಥದಲ್ಲಿ ಸಾಗಿಸುತ್ತಾರೆ ಎಂಬ ಆತ್ಮ ವಿಶ್ವಾಸವಿದೆ.ಮತದಾರರು ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವುದರ ಮೂಲಕ ನಯನಾ ಅವರಿಗೆ ಜನ ಸೇವೆ ಮಾಡಲು ಅವಕಾಶ ನೀಡಬೇಕೆಂದು ವಿನಂತಿಸಿದರು.
ಅಭ್ಯರ್ಥಿ ನಯನಾ ಮೋಟಮ್ಮ ಮಾತನಾಡಿ ' ಜನರ ಮೂಲಭೂತ ಸೌಕರ್ಯಗಳ ಪೂರೈಕೆಗೆ ಅನುಗುಣವಾಗಿ ಸಂಪನ್ಮೂಲವನ್ನು ಕ್ರೂಢಿಕರಿಸಿ ಫಲಾನುಭವಿಗಳಿಗೆ ನೀಡುವುದೇ ಕಾಂಗ್ರೆಸ್ ಪಕ್ಷದ ಕಾರ್ಯವಾಗಿದೆ.ಕ್ಷೇತ್ರದಲ್ಲಿ ಕಾಂಗ್ರೆಸನ್ನು ಗೆಲ್ಲಿಸಿದ್ದಲ್ಲಿ ಹೆಚ್ಚು ಅನುದಾನವನ್ನು ಕ್ಷೇತ್ರಕ್ಕೆ ತರಿಸಿ ಜನರ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸುವುದು ನನ್ನ ಮೊದಲ ಕೆಲಸವಾಗಿದೆ.ಪ್ರತಿಯೊಂದು ಗ್ರಾಮದ  ಜನರ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ' ಎಂದರು.
ಈ ಸಂದರ್ಭದಲ್ಲಿ ಬಾಳೂರು ಹೋಬಳಿ ಕಾಂಗ್ರೆಸ್ ಘಟಕದ ಅಧ್ಯಕ್ಷ  ಶ್ರೀನಾಥ್,ಜಿಲ್ಲಾ ವಕ್ತಾರ ಪ್ರಸನ್ನ ಮರಗುಂದ,ಮುಖಂಡರಾದ ಜಿ.ಎಚ್.ಹಾಲಪ್ಪ ಗೌಡ,ಸಬ್ಲಿ ದೇವರಾಜ್,ರವಿ ವಾಟೇಖಾನ್,ಕೆ.ಸಿ.ಮಹೇಂದ್ರ,ಉಪೇಂದ್ರ,ಲಾರೆನ್ಸ್ ಡಿಸೋಜ, ಮಹೇಶ್ ಬಾಳೂರು,ರಿಯಾಜ್, ಜಮೀರ್,ಚಂದ್ರಶೇಖರ್,ಎನ್.ಎಂ.ರವಿ,ಚಂದ್ರು ಕೂವೆ,ಲಕ್ಷ್ಮಣ್,ಮೋಹನ್ ಪಟೇಲ್,ನವೀನ್,ಸಂಜೀವ,ಸ್ವಾಮಿ ಮರ್ಕಲ್  ಮತ್ತಿತರರು ಇದ್ದರು