ಮಂಗಳವಾರ, ಜೂನ್ 4, 2024

ಬಣಕಲ್,ಜಾವಳಿ ಸುತ್ತಮುತ್ತ ಬಿಜೆಪಿಯಿಂದ ವಿಜಯೋತ್ಸವ

ಕೊಟ್ಟಿಗೆಹಾರ:ಉಡುಪಿ-ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಬಹುಮತ ಪಡೆದು ವಿಜೇತರಾಗಿರುವ ಹಿನ್ನಲೆಯಲ್ಲಿ ಬಣಕಲ್,ಕೊಟ್ಟಿಗೆಹಾರ, ಜಾವಳಿ ಮುಂತಾದ ಕಡೆಗಳಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. 
 ಜಾವಳಿಯ ಮುಖಂಡ ಪರೀಕ್ಷಿತ್ ಜಾವಳಿ ಮಾತನಾಡಿ' ಕೋಟ ಶ್ರೀನಿವಾಸ ಪೂಜಾರಿ ಅವರು ಲೋಕ ಸಭೆ ಚುನಾವಣೆಯಲ್ಲಿ ೬.೩೪,೭೪೬  ಮತ ಪಡೆದು  ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗಿಂತ ೨,೧೯,೬೯೫ ಮತಗಳ ಅಂತರದಿಂದ ಜಯಗಳಿಸಿರುವುದು   ಸಂತಸ ತಂದಿದೆ.ಕೋಟ ಶ್ರೀನಿವಾಸ್  ಪೂಜಾರಿಯವರು ಬಡ ಕುಟುಂಬದಿಂದ ಬಂದಿದ್ದು ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸಲಿದ್ದಾರೆ ಎಂಬ ಆಶಾಭಾವನೆ ವ್ಯಕ್ತ ಪಡಿಸಿದರು.  ಈ ಸಂದರ್ಭದಲ್ಲಿ ಮುಖಂಡರಾದ ಶಶಿಧರ್,ಕೃಷ್ಣ ಟೈಲರ್,ಅಭಿ,ಕಾರ್ತಿಕ್,ಪ್ರತೀಶ್,ಸಂಪತ್,ಮಂಜುನಾಥ್ ಮತ್ತಿತರರು ಇದ್ದರು.
ಕೊಟ್ಟಿಗೆಹಾರದಲ್ಲಿ ಬಿಜೆಪಿ ಮುಖಂಡರು,ಕಾರ್ಯಕರ್ತರು ಲೋಕ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಿಂತ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಮತಗಳಿಸಿ ವಿಜೇತರಾದ ಹಿನ್ನಲೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.ಬಳಿಕ ಪಟಾಕಿ ಕಸವನ್ನು ಗುಡಿಸುವುದರ ಮೂಲಕ ಸ್ವಚ್ಚಗೊಳಿಸಿದರು.
 ಈ ಸಂದರ್ಭದಲ್ಲಿ ಮುಖಂಡರಾದ ವೇಣುಗೋಪಾಲ ಪೈ, ಟಿ.ಎಂ.ನರೇಂದ್ರ ಗೌಡ, ಸಾಗರ್ ತರುವೆ, ಎ.ಎಸ್.ಅಶ್ವತ್ಥ್, ಮೋಹನ್ ಬಿನ್ನಡಿ, ದೇವೇಂದ್ರ, ಹರೀಶ್ ಆಚಾರ್ ಮುಂತಾದವರು ಇದ್ದರು.

ಉತ್ತಮ ಜೀವನ ಶೈಲಿಯಿಂದ ಆರೋಗ್ಯ ವೃದ್ದಿ

ಕೊಟ್ಟಿಗೆಹಾರ:ಉತ್ತಮ ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವುದರಿಂದ ಆರೋಗ್ಯ ವೃದ್ದಿಯಾಗುತ್ತದೆ ಎಂದು  ವಿಮುಕ್ತಿ ಸಂಸ್ಥೆ ನಿರ್ದೇಶಕರಾದ ಫಾ. ಎಡ್ವಿನ್ ಡಿಸೋಜ ಹೇಳಿದರು.
ವಿಮುಕ್ತಿ ಚಾರೀಟೇಬಲ್ ಟಸ್ಟ್ ವತಿಯಿಂದ ನಡೆದ ವಿಶ್ವ ಆರೋಗ್ಯ ದಿನಾಚರಣೆ ಹಾಗೂ ವಿಮುಕ್ತಿ ಆರೋಗ್ಯ ಸೇವೆ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮಹಿಳೆಯರು ಉತ್ತಮ ಆರೋಗ್ಯದ ಕಡೆಗೆ ಅದಷ್ಟು ಗಮನ ಹರಿಸಬೇಕು. ಉತ್ತಮ ಆರೋಗ್ಯದಿಂದ ಜೀವನ ನಡೆಸುವುದು ಪ್ರತಿಯೊಬ್ಬರ ಹಕ್ಕು. ಮಹಿಳೆಯರು ಈ ನಿಟ್ಟಿನಲ್ಲಿ ಈ ಸಂಸ್ಥೆಯ ವತಿಯಿಂದ ನಡೆಸಲಾಗುತ್ತಿರುವ ಈ ಆರೋಗ್ಯ ಸೇವೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದರು.
ಪಾಳ್ಯ ಸಂಸ್ಥೆಯ ನಿರ್ದೇಶಕರಾದ ಫಾ. ಅರುಣ್ ಲೋಬೊ ಮಾತನಾಡಿ, ಉತ್ತಮ ಆಹಾರ, ಜೀವನ ಶೈಲಿ ಮತ್ತು ವ್ಯಾಯಾಮದಿಂದ ಆರೋಗ್ಯದ ಸಮತೋಲನವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಮಧುಮೇಹ, ರಕ್ತದೊತ್ತಡದ ಪರೀಕ್ಷೆಯನ್ನು ಕಾಲಕಾಲಕ್ಕೆ ಮಾಡಿಸಿಕೊಳ್ಳಬೇಕಿದೆ ಎಂದರು.
ಈ ಸಂದರ್ಭದಲ್ಲಿ ಬಣಕಲ್ ಚರ್ಚ್ನ ಧರ್ಮಗುರುಗಳಾದ ಫಾ. ಪ್ರೇಮ್ ಡಿಸೋಜ, ಪಾಳ್ಯ ಸಂಸ್ಥೆಯ ನಿರ್ದೇಶಕರಾದ ಫಾ. ಅರುಣ್ ಲೋಬೊ, ರಾಯಚೂರು ವಿಮುಕ್ತಿ ಸಂಸ್ಥೆಯ ನಿರ್ದೇಶಕರಾದ ಫಾ. ಸತೀಶ್ ಫೆರ್ನಾಂಡಿಸ್, ಬೆಳಗಾವಿ ಚಿಕ್ಕೋಡಿಯ ವಿಮುಕ್ತಿ ಸಂಸ್ಥೆಯ ನಿರ್ದೇಶಕರಾದ ಫಾ. ವಿನ್ಸೆಂಟ್ ಡಿಸೋಜ, ಡಾ. ಮಂಜುನಾಥ್, ಸುಶೀಲಾ, ಶಾಂತಾ, ಆಶಾ ಕಾರ್ಯಕರ್ತೆಯರಾದ ಸ್ನೇಹಾ ಪ್ರಿಯಾ, ನಮ್ರಿನ್, ಸುನಿತಾ, ಕುಮಾರಿ ಸುನಂದಾ, ವಿಮುಕ್ತಿ ಸಂಸ್ಥೆಯ ಸಿಬ್ಬಂದಿಗಳಾದ ವಿಂದ್ಯಾ, ಸಿದ್ದಾಂತ್, ವಿಮುಕ್ತಿ ರಾಯಚೂರಿನ ಸಿಬ್ಬಂದಿಗಳಾದ ಚಾರ್ಲಿ, ಆರೋಗ್ಯಪ್ಪ, ಮಮತಾ, ವಿಮುಕ್ತಿ ಚಿಕ್ಕೋಡಿಯ ಸಿಬ್ಬಂದಿಗಳಾದ ಗೀತಾ, ಬ್ಲೇಜ್ ಇದ್ದರು.

ತ್ರಿಪುರದಲ್ಲಿ ರಾಷ್ಟ್ರೀಯ ತಂಬಾಕು ವಿರೋಧಿ ದಿನಾಚರಣೆ


ಕೊಟ್ಟಿಗೆಹಾರ:ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಡಿಗೆರೆ, ಬಣಕಲ್ ವಲಯದ ವತಿಯಿಂದ ತ್ರಿಪುರ ಗ್ರಾಮದಲ್ಲಿ  ರಾಷ್ಟ್ರೀಯ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಯೋಜನಾದಿಕಾರಿಗಳಾದ ಶಿವಾನಂದ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜನಜಾಗೃತಿ ವೇದಿಕೆ ಸದಸ್ಯರಾದ ಸುರೇಶ ಶೆಟ್ಟಿ, ವಲಯ ಮೇಲ್ವಿಚಾರಕರಾದ ಸಂದೀಪ್, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಭಾರತಿ, ಒಕ್ಕೂಟದ ಪದಾದಿಕಾರಿ ಗೋಪಿ, ಸೇವಾ ಪ್ರತಿನಿಧಿ ಉಷಾ ಹಾಗೂ ಪದ್ಮಾವತಿ ಜ್ಞಾನ ವಿಕಾಸ ಕೇಂದ್ರದ ಎಲ್ಲಾ ಸದಸ್ಯರು ಇದ್ದರು.

ಗ್ರಾಮಾಭಿವೃದ್ಧಿ ಯೋಜನೆಯಿಂದ ಊರುಗೋಲು ವಿತರಣೆ


ಕೊಟ್ಟಿಗೆಹಾರ:ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಬಣಕಲ್ ಗ್ರಾಮದ ಮತ್ತಿಕಟ್ಟೆ ರೋಡ್ ನಿವಾಸಿ ವಿಠ್ಠಲ್ ಗೌಡ ಅವರಿಗೆ ಊರುಗೋಲನ್ನು ವಿತರಿಸಲಾಯಿತು.
 ಈ ಸಂದರ್ಭದಲ್ಲಿ ಸುರೇಶ ಶೆಟ್ಟಿ ಜನಜಾಗ್ರತಿ ವೇದಿಕೆ ಸದಸ್ಯರು, ಸಂದೀಪ್ ವಲಯ ಮೇಲ್ವಿಚಾರಕರು, ಹಾಗೂ ಸೇವಾಪ್ರತಿನಿಧಿ ರೇವತಿ ಭಾಗವಹಿಸಿದ್ದರು.