ಮಂಗಳವಾರ, ಜೂನ್ 4, 2024

ಬಣಕಲ್,ಜಾವಳಿ ಸುತ್ತಮುತ್ತ ಬಿಜೆಪಿಯಿಂದ ವಿಜಯೋತ್ಸವ

ಕೊಟ್ಟಿಗೆಹಾರ:ಉಡುಪಿ-ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಬಹುಮತ ಪಡೆದು ವಿಜೇತರಾಗಿರುವ ಹಿನ್ನಲೆಯಲ್ಲಿ ಬಣಕಲ್,ಕೊಟ್ಟಿಗೆಹಾರ, ಜಾವಳಿ ಮುಂತಾದ ಕಡೆಗಳಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. 
 ಜಾವಳಿಯ ಮುಖಂಡ ಪರೀಕ್ಷಿತ್ ಜಾವಳಿ ಮಾತನಾಡಿ' ಕೋಟ ಶ್ರೀನಿವಾಸ ಪೂಜಾರಿ ಅವರು ಲೋಕ ಸಭೆ ಚುನಾವಣೆಯಲ್ಲಿ ೬.೩೪,೭೪೬  ಮತ ಪಡೆದು  ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗಿಂತ ೨,೧೯,೬೯೫ ಮತಗಳ ಅಂತರದಿಂದ ಜಯಗಳಿಸಿರುವುದು   ಸಂತಸ ತಂದಿದೆ.ಕೋಟ ಶ್ರೀನಿವಾಸ್  ಪೂಜಾರಿಯವರು ಬಡ ಕುಟುಂಬದಿಂದ ಬಂದಿದ್ದು ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸಲಿದ್ದಾರೆ ಎಂಬ ಆಶಾಭಾವನೆ ವ್ಯಕ್ತ ಪಡಿಸಿದರು.  ಈ ಸಂದರ್ಭದಲ್ಲಿ ಮುಖಂಡರಾದ ಶಶಿಧರ್,ಕೃಷ್ಣ ಟೈಲರ್,ಅಭಿ,ಕಾರ್ತಿಕ್,ಪ್ರತೀಶ್,ಸಂಪತ್,ಮಂಜುನಾಥ್ ಮತ್ತಿತರರು ಇದ್ದರು.
ಕೊಟ್ಟಿಗೆಹಾರದಲ್ಲಿ ಬಿಜೆಪಿ ಮುಖಂಡರು,ಕಾರ್ಯಕರ್ತರು ಲೋಕ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಿಂತ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಮತಗಳಿಸಿ ವಿಜೇತರಾದ ಹಿನ್ನಲೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.ಬಳಿಕ ಪಟಾಕಿ ಕಸವನ್ನು ಗುಡಿಸುವುದರ ಮೂಲಕ ಸ್ವಚ್ಚಗೊಳಿಸಿದರು.
 ಈ ಸಂದರ್ಭದಲ್ಲಿ ಮುಖಂಡರಾದ ವೇಣುಗೋಪಾಲ ಪೈ, ಟಿ.ಎಂ.ನರೇಂದ್ರ ಗೌಡ, ಸಾಗರ್ ತರುವೆ, ಎ.ಎಸ್.ಅಶ್ವತ್ಥ್, ಮೋಹನ್ ಬಿನ್ನಡಿ, ದೇವೇಂದ್ರ, ಹರೀಶ್ ಆಚಾರ್ ಮುಂತಾದವರು ಇದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ