ಶುಕ್ರವಾರ, ಅಕ್ಟೋಬರ್ 4, 2024

ಇಂದಿನಿಂದ (ಅಕ್ಟೋಬರ್ ೫) ರಾಜ್ಯ ಮಟ್ಟದ ಕಬ್ಸ್ ಮತ್ತು ಬುಲ್ ಬುಲ್ಸ್ ಉತ್ಸವ

ಚಿಕ್ಕಮಗಳೂರು:ಭಾರತ್ ಮತ್ತು ಸ್ಕೌಟ್ಸ್ ಗೈಡ್ಸ್ ಸಂಸ್ಥೆಯಿಂದ ಇಂದಿನಿಂದ ರಾಜ್ಯಮಟ್ಟದ ಕಬ್ಸ್ ಮತ್ತು ಬುಲ್ ಬುಲ್ಸ್ ಉತ್ಸವ ನಡೆಯಲಿದೆ ಎಂದು ಸಂಸ್ಥೆಯ ರಾಜ್ಯ ಉಪಾಧ್ಯಕ್ಷ ಎ.ಎನ್.ಮಹೇಶ್ ಹೇಳಿದರು.
ಈ ಬಗ್ಗೆ ಹೇಳಿಕೆ ನೀಡಿರುವ ಅವರು, ನಗರದ ಆದಿ ಚುಂಚನಗಿರಿ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಉತ್ಸವದ ಉದ್ಘಾಟನೆ ನೆರವೇರಿಸಲಿದ್ದಾರೆ. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಭಾಗವಹಿಸಲಿದ್ದು ರಾಣ  ಚೆನ್ನಮ್ಮ ವಿವಿ ಕುಲಪತಿ ಎಸ್.ವಿ.ತ್ಯಾಗರಾಜ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಸ್ಕೌಟ್ಸ್ ಅಂಡ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿಜಿಆರ್ ಸಿಂಧ್ಯಾ ಇಡೀ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದು, ಎಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಉತ್ಸವದಲ್ಲಿ ರಾಜ್ಯದ ೬ ರಿಂದ ೧೦ ವರ್ಷ ವಯೋಮಾನದ ಎಳೆಯರು ಭಾಗವಹಿಸಲಿದ್ದಾರೆ. ಅವರಿಗೆ ಸಾಹಸಮಯ ಚಟುವಟಿಕೆಗಳು, ಹೊಸಸಂಚಾರ, ಶೈಕ್ಷಣ ಕ ಸ್ಥಳಗಳ ಸಂದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾಧಿಕಾರಿ ಮತ್ತು ಜನಪ್ರತಿನಿಧಿಗಳ ಸಹಕಾರದೊಂದಿಗೆ ಎಲ್ಲ ಮಕ್ಕಳಿಗೂ ಉತ್ತಮ ಊಟ, ತಂಗಲು ವ್ಯವಸ್ಥೆ ಕಲ್ಪಿಸಲಾಗುವುದು. ಉತ್ಸವದ ಅಂಗವಾಗಿ ಒಂದು ಆಕರ್ಷಕ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಗುವುದು. ಉತ್ಸವದ ಹಿನ್ನಲೆಯಲ್ಲಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ವತಿಯಿಂದ ಕೀಟ ಪ್ರದರ್ಶನವೂ ನಡೆಯಲಿದೆ ಎಂದು ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ