ಭಾನುವಾರ, ನವೆಂಬರ್ 17, 2024

ತೇಜಸ್ವಿ ಪ್ರತಿಷ್ಠಾನದಲ್ಲಿ ಕನ್ನಡ ಸಂಸ್ಕೃತಿ ಮತ್ತು ತೇಜಸ್ವಿ ವಿಚಾರಗೋಷ್ಠಿ

ಕೊಟ್ಟಿಗೆಹಾರ:ಬದುಕಿದಂತೇ ಬರೆದ ಬರೆದಂತೇ ಬದುಕಿದ ತೇಜಸ್ವಿ ಅವರನ್ನು ವ್ಯಕ್ತಿಪೂಜೆ ಮಾಡದೇ ವಿಚಾರಪೂಜೆ ಅಥವಾ ವಿಚಾರಗಳನ್ನು ಅರಿಯುವುದು ಮುಖ್ಯವಾದದ್ದು ಎಂದು ಲೇಖಕ ಡಾ.ಸಂಪತ್ ಬೆಟ್ಟಗೆರೆ ಹೇಳಿದರು.
ಕೊಟ್ಟಿಗೆಹಾರದ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ಬಣಕಲ್ ಕಸಾಪ ವತಿಯಿಂದ ನಡೆದ ಕನ್ನಡ ಸಂಸ್ಕೃತಿ ಮತ್ತು ತೇಜಸ್ವಿ ವಿಚಾರ ಗೋಷ್ಠಿ ಹಾಗೂ ಕಾವ್ಯ ಸ್ಪಂದನ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.
ತೇಜಸ್ವಿ ಅವರು ಮೂಡಿಗೆರೆಗೆ ಬಂದದ್ದು ಭುವನದ ಭಾಗ್ಯ. ತೇಜಸ್ವಿ ಅವರಿಗೆ ವಿಭಿನ್ನವಾದ ಅನುಭವವನ್ನು ನೀಡಿದ್ದು ಮೂಡಿಗೆರೆ. ಭೂಮಿ ಮತ್ತು ವ್ಯಕ್ತಿಪ್ರಜ್ಞೆ ಒಂದಾಗಿ ಘಟಿಸಿದ ವ್ಯಕ್ತಿತ್ವ ತೇಜಸ್ವಿ ಅವರದು. ವಿಜ್ಞಾನವನ್ನು ಕಲಾಕೃತಿಯ ದೃಷ್ಟಿಯಲ್ಲಿ ನೋಡುವ ಪ್ರಯತ್ನವನ್ನು ತೇಜಸ್ವಿ ಅವರು ಮಾಡಿದ್ದಾರೆ. ಸಾಹಿತ್ಯ ಬೇರೆ ಮನುಷ್ಯ ಬೇರೆ ಅಲ್ಲ. ಬದುಕು ಸಂಸ್ಕೃತಿಯಾದರೇ ಸಂಸ್ಕೃತಿಯ ರೀತಿಯನ್ನು ದಾಖಲಿಸುವುದು ಸಾಹಿತ್ಯವಾಗುತ್ತದೆ ಎಂದರು.
ಇAದು ತೇಜಸ್ವಿ ಅವರ ವ್ಯಕ್ತಿತ್ವ ಮತ್ತು ಸಾಹಿತ್ಯ ತುಂಬಾ  ಲಘುವಾಗಿ ಚಿತ್ರಿಸುವ ಪ್ರಯತ್ನಗಳು ಆಗುತ್ತಿರುವುದು ತುಂಬಾ ವಿಷಾದಕರ. ತೇಜಸ್ವಿ ಅವರು ಜಾತ್ಯಾತೀತವಾದಿ ನಿಲುವಿನ ಚಿಂತಕ. ಅವರು ಎಂದಿಗೂ ಜಾತಿವಾದಿಯಲ್ಲ, ಪ್ರೀತಿಯ ಸಂತನAತೆ ಬದುಕಿದವರು. ಆದರೆ ಇಂದು ಸುಳ್ಳಾದ ಪ್ರಕ್ಷಿಪ್ತಗಳನ್ನು ಸೃಷ್ಟಿಸಿದ ಬರವಣ ಗೆ ಮತ್ತು ಭಾಷಣಗಳಿಂದ ಅವರ ವಿಚಾರಗಳನ್ನು ತಪ್ಪಾಗಿ ಅರ್ಥೈಸಿ ವ್ಯಾಖ್ಯಾನಿಸಲು ಕೆಲವು ಸ್ವಹಿತಾಸಕ್ತಿ ಚಿಂತನೆಯವರು ಮಾಡುತ್ತಿರುವುದನ್ನು ನಾವು ಖಂಡಿಸುವ ಪ್ರಯತ್ನ ಮಾಡಬೇಕು ಎಂದರು.
ಕಸಾಪ ಜಿಲ್ಲಾ  ಪ್ರಧಾನ ಸಂಚಾಲಕ ಮಗ್ಗಲಮಕ್ಕಿ ಗಣೇಶ್ ಮಾತನಾಡಿ ಕವಿಗೋಷ್ಠಿಯಲ್ಲಿ ಭಾಗವಹಿಸುವ ಕವಿಗಳು ಕವಿತೆಗೆ ಮಾತ್ರ ಸೀಮಿತವಾಗದೇ ತಮ್ಮ ಬರವಣ ಗೆಯನ್ನು ನಿರಂತರವಾಗಿ ಮುಂದುವರಿಸಿಕೊAಡು ಹೋಗಬೇಕಿದೆ. ಕನ್ನಡ ಸಾಹಿತ್ಯ ಪರಿಷತ್ತು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಾ ಬರುತ್ತಿದ್ದು ಇಂತಹ ಕಾರ್ಯಕ್ರಮಗಳ ಸದ್ಬಳಕೆಯನ್ನು ಯುವಕವಿಗಳು ಮಾಡಿಕೊಳ್ಳಬೇಕಿದೆ ಎಂದರು.   
 ಮೂಡಿಗೆರೆ ತಾಲ್ಲೂಕು ಕಸಾಪ ಅಧ್ಯಕ್ಷ ಡಿ.ಕೆ.ಲಕ್ಷ್ಮಣಗೌಡ ಮಾತನಾಡಿ ಬಣಕಲ್ ಹೋಬಳಿ ಕಸಾಪವೂ ಸಕ್ರಿಯವಾಗಿ ಸಾಹಿತ್ಯ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದೆ. ಉತ್ಸಾಹಿ ಯುವಕರ ತಂಡ ಈ ಘಟಕದಲ್ಲಿದ್ದು ನಿರಂತರವಾಗಿ ಸಾಹಿತ್ಯ ಕಾರ್ಯಗಳು ನಡೆಯಲಿ ಎಂದರು. 
ಭಾರತಿಯ ಕಿಸಾನ್ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಂಜಯಗೌಡ ಮಾತನಾಡಿ ಕನ್ನಡ ಸಂಸ್ಕೃತಿಯ ಶ್ರೀಮಂತಿಕೆಯನ್ನು ಯುವಪೀಳಿಗೆ ಅರಿಯಬೇಕಿದೆ. ಜಾನಪದ ಸೊಗಡಿನ ಗೀತೆಗಳು ಈ ಪರಂಪರೆಯ ಭಾಗವಾಗಿದ್ದು ಇದನ್ನು ಉಳಿಸಿ ಬೆಳೆಸಬೇಕಿದೆ ಎಂದರು. 
ಬಣಕಲ್ ಕಸಾಪ ಅಧ್ಯಕ್ಷ ಬಿ.ಕೆ.ಲೋಕೇಶ್ ಮಾತನಾಡಿ ಕಾವ್ಯ ಸ್ಪಂದನದಲ್ಲಿ ಭಾಗವಹಿಸಿದ ಯುವಕವಿಗಳ ಕವನಗಳು ಪುಸ್ತಕ ರೂಪದಲ್ಲಿ ತರುವ ಯೋಚನೆ ಇದೆ. ಕಾವ್ಯ ಮನಸ್ಸನ್ನು ಪ್ರಪುಲ್ಲಗೊಳಿಸುತ್ತದೆ. ಕಾವ್ಯದ ಆಸ್ವಾದನೆ ಬದುಕಿನ ಜಂಜಾಟಗಳ ಒತ್ತಡವನ್ನು ಕೂಡ ಮರೆಸಬಲ್ಲದಾಗಿದೆ ಎಂದರು.
ನಿವೃತ್ತ ಉಪನ್ಯಾಸಕ ಬಿ.ಇ.ಬಿಳಿಯಪ್ಪ, ಕಸಾಪದ ಪ್ರಕಾಶ್ ಬಕ್ಕಿ, ಕರ್ನಾಟಕ ಸಾಹಿತ್ಯ ಸಂಭ್ರಮ ವೇದಿಕೆಯ ರಾಜ್ಯ ಅಧ್ಯಕ್ಷ ಎಂ.ಎಸ್.ನಾಗರಾಜ್, ಕಸಾಪ ಪದಾಧಿಕಾರಿಗಳಾದ ಪೂರ್ಣೇಶ್ ಹೆಬ್ಬರಿಗೆ, ಭಕ್ತೇಶ್, ವಸಂತ್ ಹಾರ್ ಗೋಡು, ಸುಪ್ರೀತ್ ಬೆಟ್ಟಗೆರೆ, ರಾಮಚಂದ್ರ, ಸಂಜಯಗೌಡ, ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸಂಯೋಜಕ ನಂದೀಶ್ ಬಂಕೇನಹಳಿ, ಸಿಬ್ಬಂದಿ ಸತೀಶ್, ಸಂಗೀತಾ ಮತ್ತಿತರರು ಇದ್ದರು.


ಜನಮನ ಸೂರೆಗೊಂಡ ಕಾವ್ಯಸ್ಪಂದನ

ವಿಚಾರ ಸಂಕಿರಣದ ನಂತರ ಕಾವ್ಯಸ್ಪಂದನ ಕಾರ್ಯಕ್ರಮದಲ್ಲಿ ಬಳ್ಳಾರಿ, ಬಿಜಾಪುರ ಸೇರಿದಂತೇ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಕವಿಗಳು ಕವನ ವಾಚನ ಮಾಡಿದರು. ತೇಜಸ್ವಿ ಬದುಕು ಬರಹ ವಿಷಯದ ಬಗ್ಗೆ ಕವಿಗಳಾದ ಪೂರ್ಣೇಶ್ ಹೆಬ್ಬರಿಗೆ, ಕುಸುಮ ಮಂಜುನಾಥ್, ಡಿ.ಫ್ರಾನ್ಸಿಸ್ ಕ್ಷೇವಿಯರ್, ಅಲ್ತಾಪ್ ಬಿಳುಗುಳ, ಲಕ್ಷö್ಮಣ್ ಬಿ ಹೊಸಹಳ್ಳಿ, ಶಕುಂತಲಾ ಪಾಟೀಲ್, ಮಂಜುನಾಥ್ ರಾಠೋಡ್, ಸೌಭಾಗ್ಯ ಮಹಾಂತೇಶ್, ಹೆಸಗಲ್ ವೆಂಕಟೇಶ್, ವೇದ ಅಶೋಕ್, ಡಾ.ವೀರೇಶ್ ಕುಮಾರ್, ಶಾಲಿನಿ ಕುಂದೂರು ಕವನ ವಾಚನ ಮಾಡಿದರು. ಮಂಜುನಾಥ್ ರಾಠೋಡ್ ಬಿಜಾಪುರ (ಪ್ರಥಮ), ಲಕ್ಷö್ಮಣ್ ಬಿ ಹೊಸಳ್ಳಿ (ದ್ವಿತೀಯ), ವೇದಾ ಅಶೋಕ್ (ತೃತೀಯ) ಬಹುಮಾನವನ್ನು ಪಡೆದರು.