ಭಾನುವಾರ, ಡಿಸೆಂಬರ್ 29, 2024

ತೇಜಸ್ವಿ ಪ್ರತಿಷ್ಠಾನಕ್ಕೆ ಗೀತ ರಚನಾಕಾರ,ಸಂಗೀತ ನಿರ್ದೇಶಕ, ಹಂಸಲೇಖ ಭೇಟಿ

ಕೊಟ್ಟಿಗೆಹಾರ:ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನಕ್ಕೆ ಖ್ಯಾತ ಗೀತ ರಚನಾಕಾರ, ಸಂಗೀತ ನಿರ್ದೇಶಕ ಹಂಸಲೇಖ ಭಾನುವಾರ ಭೇಟಿ ನೀಡಿದರು.

ಪ್ರತಿಷ್ಠಾನದ ವಸ್ತು ಸಂಗ್ರಹಾಲಯ, ಕೀಟ ಸಂಗ್ರಹಾಲಯ,  ಕ್ಯಾಲಿಗ್ರಫಿ ಕಲಾಕೃತಿಗಳನ್ನು ವೀಕ್ಷಿಸಿದರು.
 
ಈ ಸಂದರ್ಭದಲ್ಲಿ ಮಾತನಾಡಿದ ಅವರು ಕುವೆಂಪು ಅವರ ಜನ್ಮದಿನದಂದು  ಅವರ ಪುತ್ರ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನಕ್ಕೆ ಭೇಟಿ ನೀಡಿದ್ದೇನೆ. ವಸ್ತು ಸಂಗ್ರಹಾಲಯದ ಉತ್ಪನ್ನ ಭಂಡಾರ ಗತಕಾಲದ ಅಪೂರ್ವ ಸಂಗ್ರಹವಾಗಿದೆ. ಕೀಟ ಸಂಗ್ರಹಾಲಯ, ವಸ್ತು ಸಂಗ್ರಹಾಲಯವನ್ನು  ನಿಂತು ಕೂತು ನಡೆದು ವೀಕ್ಷಿಸಿ ಕರ್ನಾಟಕದ ಕಿರೀಟ ಹೊತ್ತಂತೆ ಸಂಭ್ರಮಿಸಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಕವಿ ಗೋರವಿ ಆಲ್ದೂರು, ಎಂ
ಎಲ್ ಅಶೋಕ್ ಮುಂತಾದವರು ಇದ್ದರು.

ಮಂಗಳವಾರ, ಡಿಸೆಂಬರ್ 3, 2024

ಡಿಸೆಂಬರ್ ೭ ಕ್ಕೆ ತೇಜಸ್ವಿ ಪ್ರತಿಷ್ಠಾನದಲ್ಲಿ ಪುಸ್ತಕ ಪರಿಶೆ ಕಾರ್ಯಕ್ರಮ



 ಬಣಕಲ್:ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ಡಿಸೆಂಬರ್ ೭ ರಂದು ಪುಸ್ತಕ ಪರಿಶೆ ಕಾರ್ಯಕ್ರಮ ನಡೆಯಲಿದೆ.
ಡಿಸೆಂಬರ್ ೭ ರ ಶನಿವಾರ ಬೆಳಿಗ್ಗೆ ೯-೩೦ ಕ್ಕೆ ಪ್ರಾರಂಭವಾಗಲಿದ್ದು ಕಾರ್ಯಕ್ರಮದಲ್ಲಿ ವಿವಿಧ ಸಂವಾದಗಳು ನಡೆಯಲಿದೆ. ಪುಸ್ತಕ ಪ್ರಕಟಣೆ ಸವಾಲುಗಳು ಮತ್ತು ಸಾಧ್ಯತೆಗಳ ಕುರಿತು ಸಂವಶದ ನಡೆಯಲಿದ್ದು ಲೇಖಕರಿಗೆ ಉಪಯುಕ್ತ ಕಾರ್ಯಕ್ರಮ ಇದಾಗಿದೆ.
 ರಾಜ್ಯದ ವಿವಿಧ ಪ್ರಕಾಶನ ಸಂಸ್ಥೆಗಳ ಪ್ರಕಾಶಕರು, ಲೇಖಕರು ಸಂವಾದಲ್ಲಿ ವಿಷಯ ಮಂಡನೆ ಮಾಡಲಿದ್ದು ಪುಸ್ತಕ ಪ್ರಕಟಣೆ ಮಾಡುವ ಆಸಕ್ತಿ ಹೊಂದಿರುವ ಲೇಖಕರಿಗೆ ಉಪಯುಕ್ತ ಕಾರ್ಯಕ್ರಮ ಇದಾಗಿದೆ. ಇದಷ್ಟೇ ಅಲ್ಲದೇ ಸಾಮಾಜಿಕ ಜಾಲತಾಣ ಸೇರಿದಂತೇ ಬರಹದ ಹೊಸ ಮಾದ್ಯಮ ಸಾಧ್ಯತೆಗಳ ಬಗ್ಗೆ ಉಪಯುಕ್ತ ಚರ್ಚೆ ನಡೆಯಲಿದೆ. ಪ್ರಸ್ತುತ ಸಂದರ್ಭಕ್ಕೆ ಅನ್ವಯವಾಗುವಂತಹ ಬರಹದ ಆಶಯಗಳು, ಹೊಸ ತಲೆಮಾರಿನ ಸಾಹಿತ್ಯಿಕ ಜವಾಬ್ದಾರಿಯ ಕುರಿತು ಸಂವಾದ ನಡೆಯಲಿದ್ದು ಸಾಹಿತ್ಯ ವಲಯಕ್ಕೆ ಉಪಯುಕ್ತ ಕಾರ್ಯಕ್ರಮ ಇದಾಗಲಿದೆ.
ಪುಸ್ತಕ ಪ್ರಕಟಣೆ ಮಾರುಕಟ್ಟೆ ಕುರಿತ ಸಂವಾದಲ್ಲಿ ಪ್ರಕಾಶಕರಾದ ಆರ್.ಜಿ.ನಾಗರಾಜ್, ಹರಿವು ಬುಕ್ಸ್ ನ ಪ್ರಕಾಶಕರಾದ ರತೀಶ್ ಬಿ.ಆರ್, ಮಿಂಚುಳ್ಳಿ ಪ್ರಕಾಶನದ ಸೂರ್ಯಕೀರ್ತಿ ಭಾಗವಹಿಸಲಿದ್ದಾರೆ. ಬರಹದ ಹೊಸ ಮಾದ್ಯಮ ಸಂವಾದದಲ್ಲಿ ಪ್ರತಿಲಿಪಿ ಕನ್ನಡ ವಿಭಾಗದ ನಿರ್ವಾಹಕರಾದ ಅಕ್ಷಯ್ ಬಾಳೆಗೆರೆ, ಚಿತ್ರಕತೆ ಬರಹಗಾರರು, ಪತ್ರಕರ್ತರಾದ ವಿಕಾಸ್ ನೇಗಿಲೋಣ , ಮುಂಬೈ ಯುವ ಕನ್ನಡದ ಸಾಂಸ್ಕೃತಿಕ ಸಂಗಟಕರಾದ ಕುನಾಲ್ ಕನ್ನಡಿಗ ಅವರು ಭಾಗವಹಿಸಲಿದ್ದಾರೆ. ಬರಹದ ಆಶಯ, ಹೊಸ ತಲೆಮಾರಿನ ಸಾಹಿತ್ಯಿಕ ಜವಾಬ್ದಾರಿಗಳು ಕುರಿತ ಸಂವಾದದಲ್ಲಿ ವಿಮರ್ಶಕರಾದ ಡಾ.ಎಚ್.ಎಸ್.ಸತ್ಯನಾರಾಯಣ, ಕವಯತ್ರಿ ಭಾಗ್ಯಜ್ಯೋತಿ ಹಿರೇಮಠ, ಲೇಖಕರಾದ ಜಯರಾಮಾಚಾರಿ ಭಾಗವಹಿಸಲಿದ್ದಾರೆ.
ಪುಸ್ತಕ ಪರಿಶೆ ಕಾರ್ಯಕ್ರಮದಲ್ಲಿ ೧೦೦ ಲೇಖಕರಿಗೆ ಮಾತ್ರ ಅವಕಾಶವಿದ್ದು ೫೦೦ ರೂ ಪಾವತಿಸಿ ಮುಂಚಿತವಾಗಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ೮೨೭೭೫೮೯೮೫೯, ೯೬೬೩೦೯೮೮೭೩ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ. 


ಡಿಸೆಂಬರ್ ೮ ಕ್ಕೆ ದೇವರಮನೆಗೆ ಚಾರಣ
ಅಕ್ಷರ ಪರಿಶೆ ಕಾರ್ಯಕ್ರಮದ ಮರುದಿನ ಡಿಸೆಂಬರ್ ೮ ರಂದು ದೇವರಮನೆಗೆ ಚಾರಣ ಕಾರ್ಯಕ್ರಮ ಆಯೋಜಿಸಲಾಗಿದ್ದು ಅಕ್ಷರ ಪರಿಶೆ ಕಾರ್ಯಕ್ರಮಕ್ಕೆ ಹೆಸರು ನೋಂದಾಯಿಸಿದವರು ಮಾತ್ರ ಚಾರಣ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಚಾರಣದಲ್ಲಿ ಭಾಗವಹಿಸುವವರು ಪ್ರತ್ಯೇಕವಾಗಿ ಶುಲ್ಕ ಪಾವತಿಸಬೇಕಾಗುತ್ತದೆ. ಊಟ, ವಾಹನ ವ್ಯವಸ್ಥೆ, ಕಾಫಿ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ ಎಂದು ಕಾರ್ಯಕ್ರಮ ಆಯೋಜಕರು ತಿಳಿಸಿದ್ದಾರೆ.

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಶಾಸಕರಿಗೆ ಮನವಿ ಸಲ್ಲಿಕೆ


 ಬಣಕಲ್:ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರ ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಮತ್ತು ಸಖಿಯರ ಮಹಾಒಕ್ಕೂಟದ ಮೂಡಿಗೆರೆ ತಾಲ್ಲೂಕು ಘಟಕದ ವತಿಯಿಂದ ಶಾಸಕರಾದ ನಯನ ಮೋಟಮ್ಮ ಅವರಿಗೆ ಮನವಿ ಸಲ್ಲಿಸಲಾಯಿತು.

ಮಹಾಒಕ್ಕೂಟದ ಮೂಡಿಗೆರೆ ತಾಲ್ಲೂಕು ಘಟಕದ ಅಧ್ಯಕ್ಷೆ ಗಾನವಿ ಮಾತನಾಡಿ, ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು. ಮುಖ್ಯಪುಸ್ತಕ ಬರಹಗಾರರಿಗೆ ಮಾಸಿಕ ೨೦ ಸಾವಿರ ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ಮತ್ತು ಗ್ರಾ.ಪಂ ಮಟ್ಟದ ಒಕ್ಕೂಟದ ಸಖಿಯರಿಗೆ ಮಾಸಿಕ ೧೫ ಸಾವಿರ ವೇತನ ನೀಡಬೇಕು. ಸರ್ಕಾರದಿಂದ ನೇರವಾಗಿ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳಿಗೆ ವೇತನ ಜಮೆಯಾಗಬೇಕು ಎಂದರು.

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕಿ ನಯನ ಮೋಟಮ್ಮ, ಮುಖ್ಯಪುಸ್ತಕ ಬರಹಗಾರರು, ಸ್ಥಳಿಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಮತ್ತು ಒಕ್ಕೂಟದ ಸಖಿಯರ ಬೇಡಿಕೆಗಳ ಬಗ್ಗೆ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರ ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಮತ್ತು ಸಖಿಯರ ಮಹಾಒಕ್ಕೂಟದ ಮೂಡಿಗೆರೆ ತಾಲ್ಲೂಕು ಘಟಕದ ಕಾರ್ಯದರ್ಶಿ ಶ್ವೇತಾ ಶೆಟ್ಟಿ, ಖಜಾಂಚಿ ಪ್ರಾಪ್ತಿ ಹಾಗೂ ಮುಖ್ಯ ಪುಸ್ತಕ ಬರಹಗಾರರು, ಸಂಪನ್ಮೂಲ ವ್ಯಕ್ತಿಗಳು, ಸಖಿಯರು ಇದ್ದರು.