ಶುಕ್ರವಾರ, ಫೆಬ್ರವರಿ 9, 2024

ಫೆ ೨೮ ಕ್ಕೆ ಸಾವರ್ಕರ್ ಯುವ ಪ್ರತಿಷ್ಠಾನದ ಉದ್ಘಾಟನೆ ಶಿವದೂತೆ ಗುಳಿಗೆ ತುಳುನಾಟಕ ಪ್ರದರ್ಶನ



ಬಣಕಲ್:ಸಾವರ್ಕರ್ ಯುವ ಪ್ರತಿಷ್ಠಾನದ  ಉದ್ಘಾಟನಾ ಕಾರ್ಯಕ್ರಮ ಮತ್ತು ಶಿವದೂತೆ ಗುಳಿಗೆ ತುಳುನಾಟಕ ಪ್ರದರ್ಶನ ಫೆಬ್ರವರಿ ೨೮ ರಂದು ನಡೆಯಲಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಕಾರ್ಯಕ್ರಮದ ವ್ಯವಸ್ಥಾಪಕರಾದ ವಿನಯ್ ಶೆಟ್ಟಿ, ಸಾವರ್ಕರ್ ಯುವ ಪ್ರತಿಷ್ಠಾನದ ಉದ್ಘಾಟನಾ ಕಾರ್ಯಕ್ರಮದ ಹಿನ್ನಲೆಯಲ್ಲಿ ಫೆಬ್ರವರಿ ೨೮ ರಂದು ಬಣಕಲ್ ಸುಭಾಷನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಸಂಜೆ ೬ ಗಂಟೆಗೆ ಶಿವದೂತೆ ಗುಳಿಗೆ ನಾಟಕ ಪ್ರದರ್ಶನ ನಡೆಯಲಿದೆ.

 ವಿಭಿನ್ನ ಶೈಲಿಯ ಈ ತುಳು ನಾಟಕವನ್ನು ವಿಜಯಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶಿಸಿದ್ದು ಕಲಾಸಂಗಮ್ ತಂಡದ ಕಲಾವಿದರು ಅಭಿನಯಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಸರ್ವರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.