ಕೊಟ್ಟಿಗೆಹಾರ:ಉಡುಪಿ-ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಬಹುಮತ ಪಡೆದು ವಿಜೇತರಾಗಿರುವ ಹಿನ್ನಲೆಯಲ್ಲಿ ಬಣಕಲ್,ಕೊಟ್ಟಿಗೆಹಾರ, ಜಾವಳಿ ಮುಂತಾದ ಕಡೆಗಳಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಮಂಗಳವಾರ, ಜೂನ್ 4, 2024
ಉತ್ತಮ ಜೀವನ ಶೈಲಿಯಿಂದ ಆರೋಗ್ಯ ವೃದ್ದಿ
ಕೊಟ್ಟಿಗೆಹಾರ:ಉತ್ತಮ ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವುದರಿಂದ ಆರೋಗ್ಯ ವೃದ್ದಿಯಾಗುತ್ತದೆ ಎಂದು ವಿಮುಕ್ತಿ ಸಂಸ್ಥೆ ನಿರ್ದೇಶಕರಾದ ಫಾ. ಎಡ್ವಿನ್ ಡಿಸೋಜ ಹೇಳಿದರು.
ವಿಮುಕ್ತಿ ಚಾರೀಟೇಬಲ್ ಟಸ್ಟ್ ವತಿಯಿಂದ ನಡೆದ ವಿಶ್ವ ಆರೋಗ್ಯ ದಿನಾಚರಣೆ ಹಾಗೂ ವಿಮುಕ್ತಿ ಆರೋಗ್ಯ ಸೇವೆ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮಹಿಳೆಯರು ಉತ್ತಮ ಆರೋಗ್ಯದ ಕಡೆಗೆ ಅದಷ್ಟು ಗಮನ ಹರಿಸಬೇಕು. ಉತ್ತಮ ಆರೋಗ್ಯದಿಂದ ಜೀವನ ನಡೆಸುವುದು ಪ್ರತಿಯೊಬ್ಬರ ಹಕ್ಕು. ಮಹಿಳೆಯರು ಈ ನಿಟ್ಟಿನಲ್ಲಿ ಈ ಸಂಸ್ಥೆಯ ವತಿಯಿಂದ ನಡೆಸಲಾಗುತ್ತಿರುವ ಈ ಆರೋಗ್ಯ ಸೇವೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದರು.
ಪಾಳ್ಯ ಸಂಸ್ಥೆಯ ನಿರ್ದೇಶಕರಾದ ಫಾ. ಅರುಣ್ ಲೋಬೊ ಮಾತನಾಡಿ, ಉತ್ತಮ ಆಹಾರ, ಜೀವನ ಶೈಲಿ ಮತ್ತು ವ್ಯಾಯಾಮದಿಂದ ಆರೋಗ್ಯದ ಸಮತೋಲನವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಮಧುಮೇಹ, ರಕ್ತದೊತ್ತಡದ ಪರೀಕ್ಷೆಯನ್ನು ಕಾಲಕಾಲಕ್ಕೆ ಮಾಡಿಸಿಕೊಳ್ಳಬೇಕಿದೆ ಎಂದರು.
ಈ ಸಂದರ್ಭದಲ್ಲಿ ಬಣಕಲ್ ಚರ್ಚ್ನ ಧರ್ಮಗುರುಗಳಾದ ಫಾ. ಪ್ರೇಮ್ ಡಿಸೋಜ, ಪಾಳ್ಯ ಸಂಸ್ಥೆಯ ನಿರ್ದೇಶಕರಾದ ಫಾ. ಅರುಣ್ ಲೋಬೊ, ರಾಯಚೂರು ವಿಮುಕ್ತಿ ಸಂಸ್ಥೆಯ ನಿರ್ದೇಶಕರಾದ ಫಾ. ಸತೀಶ್ ಫೆರ್ನಾಂಡಿಸ್, ಬೆಳಗಾವಿ ಚಿಕ್ಕೋಡಿಯ ವಿಮುಕ್ತಿ ಸಂಸ್ಥೆಯ ನಿರ್ದೇಶಕರಾದ ಫಾ. ವಿನ್ಸೆಂಟ್ ಡಿಸೋಜ, ಡಾ. ಮಂಜುನಾಥ್, ಸುಶೀಲಾ, ಶಾಂತಾ, ಆಶಾ ಕಾರ್ಯಕರ್ತೆಯರಾದ ಸ್ನೇಹಾ ಪ್ರಿಯಾ, ನಮ್ರಿನ್, ಸುನಿತಾ, ಕುಮಾರಿ ಸುನಂದಾ, ವಿಮುಕ್ತಿ ಸಂಸ್ಥೆಯ ಸಿಬ್ಬಂದಿಗಳಾದ ವಿಂದ್ಯಾ, ಸಿದ್ದಾಂತ್, ವಿಮುಕ್ತಿ ರಾಯಚೂರಿನ ಸಿಬ್ಬಂದಿಗಳಾದ ಚಾರ್ಲಿ, ಆರೋಗ್ಯಪ್ಪ, ಮಮತಾ, ವಿಮುಕ್ತಿ ಚಿಕ್ಕೋಡಿಯ ಸಿಬ್ಬಂದಿಗಳಾದ ಗೀತಾ, ಬ್ಲೇಜ್ ಇದ್ದರು.
ಮಹಿಳೆಯರು ಉತ್ತಮ ಆರೋಗ್ಯದ ಕಡೆಗೆ ಅದಷ್ಟು ಗಮನ ಹರಿಸಬೇಕು. ಉತ್ತಮ ಆರೋಗ್ಯದಿಂದ ಜೀವನ ನಡೆಸುವುದು ಪ್ರತಿಯೊಬ್ಬರ ಹಕ್ಕು. ಮಹಿಳೆಯರು ಈ ನಿಟ್ಟಿನಲ್ಲಿ ಈ ಸಂಸ್ಥೆಯ ವತಿಯಿಂದ ನಡೆಸಲಾಗುತ್ತಿರುವ ಈ ಆರೋಗ್ಯ ಸೇವೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದರು.
ಪಾಳ್ಯ ಸಂಸ್ಥೆಯ ನಿರ್ದೇಶಕರಾದ ಫಾ. ಅರುಣ್ ಲೋಬೊ ಮಾತನಾಡಿ, ಉತ್ತಮ ಆಹಾರ, ಜೀವನ ಶೈಲಿ ಮತ್ತು ವ್ಯಾಯಾಮದಿಂದ ಆರೋಗ್ಯದ ಸಮತೋಲನವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಮಧುಮೇಹ, ರಕ್ತದೊತ್ತಡದ ಪರೀಕ್ಷೆಯನ್ನು ಕಾಲಕಾಲಕ್ಕೆ ಮಾಡಿಸಿಕೊಳ್ಳಬೇಕಿದೆ ಎಂದರು.
ಈ ಸಂದರ್ಭದಲ್ಲಿ ಬಣಕಲ್ ಚರ್ಚ್ನ ಧರ್ಮಗುರುಗಳಾದ ಫಾ. ಪ್ರೇಮ್ ಡಿಸೋಜ, ಪಾಳ್ಯ ಸಂಸ್ಥೆಯ ನಿರ್ದೇಶಕರಾದ ಫಾ. ಅರುಣ್ ಲೋಬೊ, ರಾಯಚೂರು ವಿಮುಕ್ತಿ ಸಂಸ್ಥೆಯ ನಿರ್ದೇಶಕರಾದ ಫಾ. ಸತೀಶ್ ಫೆರ್ನಾಂಡಿಸ್, ಬೆಳಗಾವಿ ಚಿಕ್ಕೋಡಿಯ ವಿಮುಕ್ತಿ ಸಂಸ್ಥೆಯ ನಿರ್ದೇಶಕರಾದ ಫಾ. ವಿನ್ಸೆಂಟ್ ಡಿಸೋಜ, ಡಾ. ಮಂಜುನಾಥ್, ಸುಶೀಲಾ, ಶಾಂತಾ, ಆಶಾ ಕಾರ್ಯಕರ್ತೆಯರಾದ ಸ್ನೇಹಾ ಪ್ರಿಯಾ, ನಮ್ರಿನ್, ಸುನಿತಾ, ಕುಮಾರಿ ಸುನಂದಾ, ವಿಮುಕ್ತಿ ಸಂಸ್ಥೆಯ ಸಿಬ್ಬಂದಿಗಳಾದ ವಿಂದ್ಯಾ, ಸಿದ್ದಾಂತ್, ವಿಮುಕ್ತಿ ರಾಯಚೂರಿನ ಸಿಬ್ಬಂದಿಗಳಾದ ಚಾರ್ಲಿ, ಆರೋಗ್ಯಪ್ಪ, ಮಮತಾ, ವಿಮುಕ್ತಿ ಚಿಕ್ಕೋಡಿಯ ಸಿಬ್ಬಂದಿಗಳಾದ ಗೀತಾ, ಬ್ಲೇಜ್ ಇದ್ದರು.
ತ್ರಿಪುರದಲ್ಲಿ ರಾಷ್ಟ್ರೀಯ ತಂಬಾಕು ವಿರೋಧಿ ದಿನಾಚರಣೆ
ಕೊಟ್ಟಿಗೆಹಾರ:ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಡಿಗೆರೆ, ಬಣಕಲ್ ವಲಯದ ವತಿಯಿಂದ ತ್ರಿಪುರ ಗ್ರಾಮದಲ್ಲಿ ರಾಷ್ಟ್ರೀಯ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)