ಸೋಮವಾರ, ಡಿಸೆಂಬರ್ 1, 2025

ತೇಜಸ್ವಿ ಪ್ರತಿಷ್ಠಾನದಲ್ಲಿ ಚಿಟ್ಟೆ ಉದ್ಯಾನವನ ವೀಕ್ಷಣೆಗೆ ಮುಕ್ತ


ಕೊಟ್ಟಿಗೆಹಾರ;ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ಚಿಟ್ಟೆ ಉದ್ಯಾನವನ ವೀಕ್ಷಣೆಗೆ ಮುಕ್ತವಾಗಿದ್ದು ಚಿಟ್ಟೆಗಳಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಿದೆ ಎಂದು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಪ್ರದೀಪ್ ಕೆಂಜಿಗೆ ಹೇಳಿದರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ವತಿಯಿಂದ ಕೊಟ್ಟಿಗೆಹಾರದಲ್ಲಿ ನಡೆದ ಡಿಜಿಟಲ್ ಕನ್ನಡ ಫಾಂಟ್ ಕಾರ್ಯಾಗಾರ ಮತ್ತು ಕನ್ನಡ ಕೈಬರಹ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಚಿಟ್ಟೆ ಉದ್ಯಾನವನದಲ್ಲಿ ಚಿಟ್ಟೆಗಳಿಗೆ ಸಂಬಂಧಿಸಿದ ಅತಿಥೇಯ ಸಸ್ಯಗಳನ್ನು ನೆಡಲಾಗಿದ್ದು ಮಡ್ ಪಡ್ಲಿಂಗ್ ಮತ್ತು ಆಹಾರ ಪೂರಕಗಳನ್ನು ಮಾಡಲಾಗಿದೆ. ಚಿಟ್ಟೆಗಳ ಕುರಿತಾದ ಮಾಹಿತಿ ಫಲಕಗಳನ್ನು ಉದ್ಯಾನವನದಲ್ಲಿ ಹಾಕಲಾಗಿದ್ದು ಚಿಟ್ಟೆಗಳ ಜಗತ್ತಿನ ವಿವರಗಳು ಜ್ಞಾನಾಸಕ್ತರಿಗೆ ಸಿಗಲಿದೆ. ಆರ್ಕಿಡ್‌ಗಳ ಮಹತ್ವ ಮತ್ತು ಸಂರಕ್ಷಣೆಯ ಅರಿವು ಮೂಡಿಸುವ ಆರ್ಕಿಡ್ ಲೋಕ ಪ್ರಮುಖ ಆಕರ್ಷಣೆಯಾಗಿದೆ. ರಂಗಮಂದಿರ ಮತ್ತು ವಸತಿಗೃಹದ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಳ್ಳಲಿದ್ದು ಕಾರ್ಯಾಗಾರ, ನಾಟಕ ಮುಂತಾದ ಚಟುವಟಿಕೆಗಳು ನಿರಂತರವಾಗಿ ನಡೆಯಲಿದೆ ಎಂದರು.
ತೇಜಸ್ವಿ ಪ್ರತಿಷ್ಠಾನದ ಸದಸ್ಯರಾದ ರವೀಶ್ ಬಸಪ್ಪ ಮಾತನಾಡಿ, ಕುತೂಹಲ, ಜೀವನ ಪ್ರೀತಿ, ಜೀವನೋತ್ಸಾಹವನ್ನು ಮಕ್ಕಳು ಬೆಳಸಿಕೊಳ್ಳಬೇಕು. ಬಹುಮುಖ ವ್ಯಕ್ತಿತ್ವದ ತೇಜಸ್ವಿ ಅವರ ಕೃತಿಗಳನ್ನು ಮಕ್ಕಳು ಓದಬೇಕು ಎಂದರು.
ತೇಜಸ್ವಿ ಪ್ರತಿಷ್ಠಾನದ ಸದಸ್ಯರಾದ ದೀಪಾ ಹಿರೇಗುತ್ತಿ ಮಾತನಾಡಿ, ತೇಜಸ್ವಿ ಅವರ ಮಿಲೇನಿಯಂ ಸರಣಿಯ ಪುಸ್ತಕಗಳು ಮಕ್ಕಳಲ್ಲಿ ಓದಿನ ಅಭಿರುಚಿಯನ್ನು ಬೆಳೆಸುತ್ತವೆ. ತೇಜಸ್ವಿ ಪ್ರತಿಷ್ಠಾನ ಬಹುಮುಖ ವ್ಯಕ್ತಿತ್ವದ ತೇಜಸ್ವಿ ಅವರ ಆಶಯಗಳನ್ನು ತಮ್ಮ ಕಾರ್ಯ ಚಟುವಟಿಕೆಗಳ ಮೂಲಕ ಸಕ್ರಿಯವಾಗಿಟ್ಟಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಸಿ.ರಮೇಶ್ ಮಾತನಾಡಿ, ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕನ್ನಡ ಭಾಷೆಯನ್ನು ಬಲಿಷ್ಠವಾಗಿ ಬೆಳೆಸಲು ಸಾಧ್ಯವಾದರೇ ಮಾತ್ರ ಕನ್ನಡ ಭಾಷೆ ಉಳಿಯುತ್ತದೆ ಎಂಬುದು ತೇಜಸ್ವಿ ಅವರ ಅಭಿಪ್ರಾಯವಾಗಿತ್ತು. ಕನ್ನಡ ಭಾಷೆಯನ್ನು ತಂತ್ರಜ್ಞಾನಸ್ನೇಹಿ ಭಾಷೆಯಾಗಿಸಲು ಡಿಜಿಟಲ್ ಕನ್ನಡ ಫಾಂಟ್ ಕಾರ್ಯಾಗಾರದಂತಹ  ಕಾರ್ಯಕ್ರಮಗಳು  ಸಹಾಯಕ ಎಂದರು.
ಡಿಜಿಟಲ್  ಕನ್ನಡ ಫಾಂಟ್ ವಿನ್ಯಾಸಕಾರರಾದ ಮಂಜುನಾಥ್ ಆರ್, ಡಿಜಿಟಲ್ ಕನ್ನಡ ಫಾಂಟ್ ಕುರಿತು ಮಾಹಿತಿ ನೀಡಿದರು. ತೇಜಸ್ವಿ ಪ್ರತಿಷ್ಠಾನದ ಸದಸ್ಯ ರವೀಶ್ ಬಸಪ್ಪ ಅವರು, ೨೦೨೬ನೇ ಸಾಲಿನ ಕ್ಯಾಲೆಂಡರ್‌ನ ವಿನ್ಯಾಸ ಬಿಡುಗಡೆ ಮಾಡಿದರು. ಸದಸ್ಯರಾದ ದೀಪಾ ಹಿರೇಗುತ್ತಿ ಅವರು ಆರ್ಕಿಡ್ ಮಾಹಿತಿ ಫಲಕಗಳನ್ನು ಉದ್ಘಾಟನೆ ಮಾಡಿದರು. ತೇಜಸ್ವಿ ಪ್ರತಿಷ್ಠಾನದ ಆವರಣದಲ್ಲಿ ಕಂಡು ಬರುವ ಅಪರೂಪದ  ಚಿಟ್ಟೆಗಳ ಪರಿಚಯ ಫಲಕಗಳು ಮತ್ತು ಚಿಟ್ಟೆ ಉದ್ಯಾನ ಸಂಬಂಧಿಸಿದ ಮಾಹಿತಿ ಫಲಕವನ್ನು ಕಲಾವಿದರಾದ ಸುರೇಶ್ ಚಂದ್ರ ದತ್ತ ನೆರವೇರಿಸಿದರು. ಕೈ ಬರಹ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ವಿಜ್ಞಾನಿಗಳಾದ ಡಾ.ಸುಚಿತ್ರಕುಮಾರಿ, ಕೀಟ ತಜ್ಞ ಡಾ.ಅವಿನಾಶ್, ತೇಜಸ್ವಿ ಪ್ರತಿಷ್ಠಾನದ ತಾಂತ್ರಿಕ ಸಂಯೋಜಕ ಪ್ರಜ್ವಲ್, ಸಂಯೋಜಕ ನಂದೀಶ್ ಬಂಕೇನಹಳ್ಳಿ, ಸಿಬ್ಬಂದಿ ಸತೀಶ್ ತರುವೆ, ಪೂರ್ಣೇಶ್, ಸಂಗೀತಾ, ಸಿದ್ದಿಕ್, ಕಲಾವಿದರಾದ ಬಾಪು ದಿನೇಶ್, ಟಿ.ಡಿ ಸುರೇಶ್, ಸಾಮಾಜಿಕ ಕಾರ್ಯಕರ್ತ ಸಂಜಯಗೌಡ, ರೈತ ಮುಖಂಡ ಗುರುಶಾಂತಪ್ಪ, ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಕೈಬರಹ ಸ್ಪರ್ಧೆಯ ವಿಜೇತರು ಹಾಜರಿದ್ದರು.

ಸೋಮವಾರ, ನವೆಂಬರ್ 10, 2025

ತೇಜಸ್ವಿ ಪ್ರತಿಷ್ಠಾನದಿಂದ ಕನ್ನಡ ಕೈಬರಹ ಸ್ಪರ್ಧೆ


ಕೊಟ್ಟಿಗೆಹಾರ:೭೦ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ವತಿಯಿಂದ ತೇಜಸ್ವಿ ಅವರಿಗೊಂದು ಪತ್ರ-ಕನ್ನಡ ಕೈ ಬರಹ ಸ್ಪರ್ಧೆಗೆ ಕೈ ಬರಹವನ್ನು ಆಹ್ವಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ತೇಜಸ್ವಿ ಪ್ರತಿಷ್ಠಾನದ ಸದಸ್ಯ ಕಾರ್ಯದರ್ಶಿಗಳಾದ ಡಾ.ಸಿ.ರಮೇಶ್ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೈ ಬರಹ ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಫರ್ಧಾರ್ಥಿಗಳು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರಿಗೆ ಕಾಲ್ಪನಿಕ ಪತ್ರವನ್ನು ತಮ್ಮ ಸ್ವಂತ ಕನ್ನಡ ಕೈ ಬರಹದಲ್ಲಿ ಬರೆಯಬೇಕು. ೧೮ ವರ್ಷದೊಳಗಿನ ಸ್ಪರ್ಧಿಗಳಿಗೆ ಮಾತ್ರ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದ್ದು ಪತ್ರವನ್ನು ಎ೪ ಸೈಜಿನ ಹಾಳೆಯಲ್ಲಿ ಬರೆಯಬೇಕು. ಕೈ ಬರಹದ ಮೂಲ ಪ್ರತಿಯನ್ನೇ ಕಳುಹಿಸಬೇಕು. ಜೆರಾಕ್ಸ್ ಅಥವಾ ಪ್ರಿಂಟ್ ಪ್ರತಿಗಳನ್ನು ಸ್ವೀಕರಿಸಲಾಗುವುದಿಲ್ಲ . ಪತ್ರದೊಂದಿಗೆ ಪ್ರತ್ಯೇಕ ಹಾಳೆಯಲ್ಲಿ ಸ್ಪರ್ಧಿಗಳ ಪರಿಚಯ, ವಿಳಾಸ, ಮೊಬೈಲ್ ಸಂಖ್ಯೆಯನ್ನು ಬರೆದು ಆಧಾರ್ ಕಾರ್ಡ್ ನಕಲು, ಪಾಸ್ ಪೋರ್ಟ್ ಸೈಜಿನ ಭಾವಚಿತ್ರ ಮತ್ತು ಕೈ ಬರಹ ಸ್ಪರ್ಧಾರ್ಥಿಗಳದ್ದೇ ಎಂಬ ಕುರಿತ ಸ್ವಯಂ ಘೋಷಣಾ ಪತ್ರವನ್ನ ಲಗತ್ತಿಸಬೇಕು ಎಂದು ತಿಳಿಸಿದ್ದಾರೆ.
ಕೈ ಬರಹದ ಪತ್ರವನ್ನು ನವೆಂಬರ್ ೨೦ ರೊಳಗೆ ತಲುಪುವಂತೇ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ (ರಿ), ಕೊಟ್ಟಿಗೆಹಾರ ಅಂಚೆ, ಮೂಡಿಗೆರೆ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆ-೫೭೭೧೧೩ ಈ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ತಲುಪಿಸಬಹುದು. ಅತ್ಯುತ್ತಮ ಕೈ ಬರಹ ಮತ್ತು ಅತ್ಯುತ್ತಮ ಪತ್ರ ಎಂಬ ಎರಡು ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನಗಳನ್ನು ಆಯ್ಕೆ ಮಾಡಲಾಗುತ್ತದೆ. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿದ್ದು ಪ್ರಥಮ ಬಹುಮಾನ ೫೦೦೦, ದ್ವಿತೀಯ ಬಹುಮಾನ ೩೦೦೦, ತೃತೀಯ ಬಹುಮಾನ ೨೦೦೦ ನಗದು ಹಾಗೂ ಪ್ರಮಾಣ ಪತ್ರವನ್ನು ಒಳಗೊಂಡಿರುತ್ತದೆ. ವಿಜೇತರ ಪಟ್ಟಿಯನ್ನು ನವೆಂಬರ್ ೨೫ ರ ಸಂಜೆ ೫ ಗಂಟೆಗೆ ತೇಜಸ್ವಿ ಪ್ರತಿಷ್ಠಾನದ ಅಧಿಕೃತ ಜಾಲತಾಣ @ಞಠಿಠಿಣಡಿusಣ ನಲ್ಲಿ ಪ್ರಕಟಿಸಲಾಗುವುದು. ಹೆಚ್ಚಿನ ಮಾಹಿತಿಗೆ ೯೬೬೩೦೯೮೮೭೩, ೯೪೪೯೩೦೯೦೬೭ ಗೆ ಸಂರ್ಪಕಿಸಬಹುದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗುರುವಾರ, ಸೆಪ್ಟೆಂಬರ್ 4, 2025

ಸೆಪ್ಟೆಂಬರ್ ೭ ರಂದು ಚಿಂತನ ಮಂಥನ ಸಭೆ


  ಚಿಕ್ಕಮಗಳೂರು:ಭಗೀರಥ ಶೈಕ್ಷಣಿಕ ಮತ್ತು ಚಾರಿಟಬಲ್ ಟ್ರಸ್ಟ್ ವತಿಯಿಂದ ಸೆಪ್ಟೆಂಬರ್ ೭ ರ ಭಾನುವಾರ ಮೈಸೂರಿನಲ್ಲಿ ಚಿಂತನ ಮಂಥನ ಸಭೆ ನಡೆಯಲಿದೆ ಎಂದು ಭಗೀರಥ ಶೈಕ್ಷಣಿಕ ಮತ್ತು ಚಾರಿಟಬಲ್ ಟ್ರಸ್ಟ್ ನ  ಸದಸ್ಯರಾದ ಬೀರೂರಿನ ಶ್ರೀನಿವಾಸ ಬಿ.ಎನ್ ಮತ್ತು ಕಡೂರಿನ ಲಕ್ಕಪ್ಪ ಅವರು ತಿಳಿಸಿದ್ದಾರೆ.

ಈ ಬಗ್ಗೆ ಜಂಟಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು ಸಪ್ಟೆಂಬರ್ ೭ ರಂದು ಮೈಸೂರಿನ ಸರಸ್ವತಿಪುರಂನಲ್ಲಿರುವ ಉಪ್ಪಾರ ವಿದ್ಯಾರ್ಥಿ ನಿಲಯದಲ್ಲಿ ಟ್ರಸ್ಟಿನ ಆಡಳಿತ ಮಂಡಳಿ ಸಭೆ  ಮತ್ತು ಉಪ್ಪಾರ ಸಮಾಜದ ಬಂಧುಗಳೊAದಿಗೆ ಚಿಂತನ ಮಂಥನ ಸಭೆ ನಡೆಯಲಿದೆ. ಮ್ಯಾನೇಜಿಂಗ್ ಟ್ರಸ್ಟಿಗಳಾದ ಪಿ.ಶಿವಶಂಕರ್ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ ೧೧ ಗಂಟೆಗೆ ಚಿಂತನಾ ಮಂಥನ ಸಭೆ ನಡೆಯಲಿದ್ದು ಮಧ್ಯಾಹ್ನ  ೨ ಗಂಟೆಗೆ ಟ್ರಸ್ಟಿನ ಸರ್ವ ಸದಸ್ಯರ ಸಭೆ ನಡೆಯಲಿದೆ. ಈ ಸಭೆಗೆ ಸಮಾಜ ಭಾಂದವರು ಭಾಗವಹಿಸಿ ಸಮಾಜದ ಏಳಿಗೆಯ ಕುರಿತ ಚಿಂತನ ಮಂಥನ ಸಭೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದ್ದಾರೆ.
ಭಗೀರಥ ಶೈಕ್ಷಣಿಕ ಮತ್ತು ಚಾರಿಟಬಲ್ ಟ್ರಸ್ಟ್  ಉಪ್ಪಾರ ಸಮಾಜದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮತ್ತು ಔದ್ಯೋಗಿಕ ಏಳಿಗೆಗೆ ಕಂಕಣಬದ್ದವಾಗಿದ್ದು ಸಮಾಜದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡುತ್ತಾ ಬಂದಿದೆ. ೨೦೨೪-೨೫ನೇ ಸಾಲಿನಲ್ಲಿ ವೈದ್ಯಕೀಯ, ಇಂಜಿನಿಯರಿಂಗ, ಆರ್ಯುವೇದಿಕ್, ಕೃಷಿ, ತೋಟಗಾರಿಕೆ, ಭಿ ಫಾರ್ಮಾ, ಪ್ಯಾರಾಮೆಡಿಕಲ್, ಬಿ ಎಡ್, ಕಾನೂನು, ಸ್ನಾತಕೋತರ ಕೋರ್ಸ್ಗಳನ್ನು ವ್ಯಾಸಂಗ ಮಾಡುತ್ತಿರುವ ರಾಜ್ಯದ ೪ ವಿವಿಧ ಜಿಲ್ಲೆಗಳಿಗೆ ಸೇರಿದ ೧೨೮ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಸುಮಾರು ಇಪ್ಪತ್ಮೂರು ಲಕ್ಷ ಆರ್ಥಿಕ ನೆರವನ್ನು ನೀಡಲಾಗಿದೆ. ಸಮಾಜ ಭಾಂದವರ ಸರ್ವಾಂಗೀಣ ಅಭಿವೃದ್ದಿಗೆ ಪೂರಕವಾಗಿ ಸೆಪ್ಟೆಂಬರ್ ೭ ರಂದು ನಡೆಯುವ ಸಭೆಯ ಕುರಿತ ಹೆಚ್ಚಿನ ಮಾಹಿತಿಗೆ ೯೮೪೪೫೯೦೬೨೪/೯೯೬೪೧೨೫೩೪೧ ಗೆ ಸಂರ್ಪಕಿಸಬಹುದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಶುಕ್ರವಾರ, ಆಗಸ್ಟ್ 15, 2025

ಶ್ರಮಜೀವಿ ಆಟೋ ಮಾಲೀಕರು ಮತ್ತು ಚಾಲಕರ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ


ಕೊಟ್ಟಿಗೆಹಾರ:ಸ್ವಾತಂತ್ರ್ಯ ತಂದು ಕೊಡಲು ಶ್ರಮಿಸಿದ ಸಾವಿರಾರು ಹೋರಾಟಗಾರರ ತ್ಯಾಗ ಬಲಿದಾನವನ್ನು ಸ್ಮರಿಸಬೇಕಿದೆ ಎಂದು ಬಣಕಲ್ ಪ್ರೌಢಶಾಲೆಯ ಮುಖ್ಯಶಿಕ್ಷಕ ಶ್ರೀನಿವಾಸ್ ಹೇಳಿದರು.
ಬಣಕಲ್‌ನ ಶ್ರಮಜೀವಿ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ನಡೆದ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಿಜ ಅರ್ಥದಲ್ಲಿ ಪೂರ್ಣ ಸ್ವಾತಂತ್ರ ಇನ್ನೂ ಸಿಕ್ಕಿಲ್ಲ. ಎಲ್ಲರಿಗೂ ಸಮನಾಗಿ ಸ್ವಾತಂತ್ರ್ಯವೂ ಸಿಗುವಂತಾಗಬೇಕಿದೆ. ರಾಷ್ಟ್ರೀಯ ಹಬ್ಬಗಳ ಆಚರಣೆ ಮಕ್ಕಳು ಸೇರಿದಂತೇ ಎಲ್ಲರಲ್ಲೂ ದೇಶಾಭಿಮಾನವನ್ನು ಹೆಚ್ಚಿಸಲು ವೇದಿಕೆಯಾಗಿದೆ ಎಂದರು.
ದಾನಿಗಳಾದ ಬಿ.ಎನ್.ದಿವ್ಯಪ್ರಸಾದ್ ಧ್ವಜರೋಹಣ ನೆರವೇರಿಸಿದರು. 
ಸಾಧಕರಾದ ಹಿಲಾರಿ ಜೋಸೆಫ್, ನಂದೀಶ್ ಬಂಕೇನಹಳ್ಳಿ, ಸೂರಿ ಬಣಕಲ್, ಮಾನವಿ ಬಗ್ಗಸಗೋಡು, ಶೇಖರ್ ಸಬ್ಲಿ ಮತ್ತು ದಾನಿಗಳಾದ ಬಿ.ಎನ್.ದೀಪಕ್, ಬಿ.ಎನ್.ದಿವ್ಯಪ್ರಸಾದ್ ಅವರನ್ನು ಸನ್ಮಾನಿಸಲಾಯಿತು.
ಸ್ವಾತಂತ್ರ ದಿನಾಚರಣೆ ಅಂಗವಾಗಿ ಆಟೋಗಳನ್ನು ಆಕರ್ಷಕವಾಗಿ ಸಿಂಗರಿಸಲಾಯಿತು. ಬಣಕಲ್ ಪ್ರೌಢಶಾಲೆ ಮತ್ತು ರಿವರ್ ವ್ಯೂವ್ ಶಾಲೆಯ ವಿದ್ಯಾರ್ಥಿಗಳು ಬಣಕಲ್ ಮುಖ್ಯ ರಸ್ತೆಯಲ್ಲಿ ಮೆರವಣ ಗೆ ನಡೆಸಿದರು. 
ಈ ಸಂದರ್ಭದಲ್ಲಿ ಶ್ರಮಜೀವಿ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಸುರೇಶ್, ಗೌರವ ಅಧ್ಯಕ್ಷರಾದ ಸಬ್ಲಿ ದೇವರಾಜ್ ಹಾಗೂ ಪದಾಧಿಕಾರಿಗಳು ಇದ್ದರು.
ವಿವಿಧೆಡೆ ಸಂಭ್ರಮದ ಸ್ವಾತಂತ್ರ ದಿನಾಚರಣೆ: ಬಣಕಲ್‌ನಲ್ಲಿ ವಿವಿದೆಡೆ ಸ್ವಾತಂತ್ರ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಬಣಕಲ್ ಗ್ರಾ.ಪಂಯಲ್ಲಿ ಅಧ್ಯಕ್ಷರಾದ ಜರೀನಾ, ವಿದ್ಯಾಭಾರತಿ ಶಾಲೆಯಲ್ಲಿ ಸವಿತಾ ಸಮಾಜದ ಅಧ್ಯಕ್ಷ ಹರೀಶ್ ಫಲ್ಗುಣ , ಬಣಕಲ್ ಪ್ರೌಢಶಾಲೆಯಲ್ಲಿ ಕೋಶಾಧಿಕಾರಿ ಬಿ.ಕೆ.ಪೃಥ್ವಿ, ನಜರೆತ್ ಶಾಲೆಯಲ್ಲಿ ಪೋಷಕರಾದ ಭವ್ಯಾಭಟ್ ನೆರವೇರಿಸಿದರು.

ಬುಧವಾರ, ಆಗಸ್ಟ್ 6, 2025

ಶಾಸಕರ ತೇಜೋವಧೆ ಸರಿಯಲ್ಲ:ಸಬ್ಲಿ ದೇವರಾಜ್

 ಬಣಕಲ್:ಮೂಡಿಗೆರೆ ಶಾಸಕರಾದ ನಯನ ಮೋಟಮ್ಮ ಅವರು ತಾಲ್ಲೂಕು ಗಣೇಶೋತ್ಸವ ಸಮಿತಿ ಲೋಗೋ ಮತ್ತು ಭಗವಾಧ್ವಜ ಸ್ತಂಭ ಸ್ಥಾಪನಾ ಕಾರ್ಯಕ್ರಮದಲ್ಲಿ ಕೇಸರಿ ಬಣ್ಣದ ಶಾಲು ಧರಿಸಿದ ಕಾರಣ ಶಾಸಕರನ್ನು ತೇಜೋವಧೆ ಮಾಡುವುದು ಸರಿಯಲ್ಲ ಎಂದು ತಾ.ಪಂ ಮಾಜಿ ಸದಸ್ಯರಾದ ಸಬ್ಲಿ ದೇವರಾಜು ಹೇಳಿದರು.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಶಾಸಕರಾಗಿ ಅವರು ತಮ್ಮ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ. ಶಾಸಕರಾದ ಮೇಲೆ ಒಂದು ಜಾತಿಗೆ, ಧರ್ಮಕ್ಕೆ ಹೇಗೆ ಸೀಮಿತರಾಗಲು ಸಾಧ್ಯ?. ಯಾವುದೇ ಧರ್ಮದ ಕಾರ್ಯಕ್ರಮದಲ್ಲ್ಲಿ ಆ ಧರ್ಮದ ಆಚರಣೆಯಂತೆಯೇ ಭಾಗವಹಿಸಬೇಕು ಅದು ಆ ಧರ್ಮಕ್ಕೆ ಕೊಡುವ ಗೌರವ. ಶಾಸಕರು ಮೊದಲಿನಿಂದಲೂ ದೇವರ ಮೇಲೆ ಅಪಾರ ಭಕ್ತಿ ಭಾವ ಹೊಂದಿರುವ ವ್ಯಕ್ತಿ. ಒಬ್ಬ ಶಾಸಕ ಹಿಂದೂ ಆಗಿರಲಿ, ಮುಸ್ಲಿಂ ಅಥವಾ ಕ್ರೈಸ್ತ ಅಥವಾ ಇನ್ನಾವುದೇ ಧರ್ಮದವರಾಗಿರಲಿ. ಇತರೆ ಧರ್ಮದ ಪೂಜೆ ಪುರಸ್ಕಾರ ಹಬ್ಬ ಹರಿದಿನಗಳಿಗೆ ಅವರ ಸಂಪ್ರದಾಯದಂತೆ ಭಾಗವಹಿಸಬೇಕು. ಅದು ಅಲ್ಲದೆ ಗಣೇಶ ಚತುರ್ಥಿ ಎಂಬುದು ಧರ್ಮ ಜಾತಿ ಮೀರಿ ನಡೆಯುವ ಹಬ್ಬವಾಗಿದೆ ಎಂದರು.
ಕೇಸರಿ ಬಣ್ಣದ ಶಾಲು ಯಾವುದೇ ಒಂದು ಸಂಘಟನೆಯ ಸ್ವತ್ತಲ್ಲ. ಮನೆಯ ಅಥವಾ ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಎಲ್ಲರೂ ಕೇಸರಿ ಶಾಲನ್ನು ಧರಿಸುತ್ತಾರೆ. ಅದು ಸಹಜವೂ ಕೂಡ. ಅದರಲ್ಲಿ ತಪ್ಪು ಹುಡುಕುವ ಅಗತ್ಯವಿಲ್ಲ. ಒಬ್ಬ ಶಾಸಕರಿಂದ  ಜನರಿಗೆ ಸ್ಪಂದನೆ, ಸೌಲಭ್ಯ, ಅನ್ಯ ಜಾತಿ, ಧರ್ಮಗಳೊಂದಿಗೆ ಸೌಹಾರ್ದತೆ ಇದೆಯೇ ಎಂಬುದನ್ನು ಗಮನಿಸಬೇಕೇ ಹೊರತು ಈ ರೀತಿಯ ವಿಷಯಗಳನಲ್ಲ. ಶಾಸಕರು ತಾಲ್ಲೂಕು ಗಣೇಶೋತ್ಸವ ಸಮಿತಿಯ ಕಾರ್ಯಕ್ರಮದ ವೇದಿಕೆಯಲ್ಲಿ ಯಾವ ಧರ್ಮದ ಬಗ್ಗೆಯೂ ಕೂಡ ಅವಹೇಳನಕಾರಿಯಾಗಿ ಮಾತನಾಡಿಲ್ಲ. ಹೀಗಿರುವಾಗ ಈ ವಿಚಾರದಲ್ಲಿ ತಪ್ಪು ಹುಡುಕುವುದರಲ್ಲಿ ಅರ್ಥವಿಲ್ಲ ಎಂದು ತಿಳಿಸಿದ್ದಾರೆ.

ಬುಧವಾರ, ಜೂನ್ 25, 2025

ವನ್ ಧನ್ ವಿಕಾಸ ಕೇಂದ್ರದ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ


ಬಣಕಲ್:ವನ್ ಧನ್ ವಿಕಾಸ ಕೇಂದ್ರದ ಸೌಲಭ್ಯಗಳ ಸದುಪಯೋಗ ಪಡೆದುಕೊಂಡು ಸ್ವಾವಲಂಭಿ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಎನ್‌ಆರ್‌ಎಲ್‌ಎಂನ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಶಾಲಿನಿ ಹೇಳಿದರು.
ಬಣಕಲ್ ಗ್ರಾ.ಪಂ ಸಭಾಂಗಣದಲ್ಲಿ ನಡೆದ ವಿಡಿವಿಕೆ ಮತ್ತು ಎಂಬ್ರಾಯಿಡರಿ ತರಬೇತಿ ಕುರಿತ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಗ್ರಾಮೀಣ ಮಹಿಳೆಯರ ಆರ್ಥಿಕ ಅಭಿವೃದ್ದಿ ಹಾಗೂ ಅರಣ್ಯ ಉತ್ಪನ್ನಗಳ ಮೌಲ್ಯವರ್ಧನೆಗಾಗಿ ಕೇಂದ್ರ ಸರ್ಕಾರದ ದೀನದಯಾಳ್ ಅಂತ್ಯೋದಯ ಯೋಜನೆಯ ರಾಷ್ಟೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಅಡಿಯಲ್ಲಿ ವನ್ ಧನ್ ವಿಕಾಸ್ ಕೇಂದ್ರಗಳು ಸ್ಥಾಪನೆಯಾಗಿವೆ. ಈ ಯೋಜನೆಯು ಮಹಿಳಾ ಸ್ವಸಹಾಯ ಗುಂಪುಗಳ ಮೂಲಕ ಪ್ರಾದೇಶಿಕ ಅರಣ್ಯ ಉತ್ಪನ್ನಗಳ ಸಂಗ್ರಹ, ಸಂಸ್ಕರಣೆ, ಪ್ಯಾಕೇಜಿಂಗ್ ಮತ್ತು ಮಾರಾಟಕ್ಕೆ ಅವಕಾಶ ನೀಡುತ್ತದೆ ಎಂದರು.
ಪಿಡಿಓ ಕೃಷ್ಣಪ್ಪ ಮಾತನಾಡಿ ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಂಡು ಮಹಿಳೆಯರು ಆರ್ಥಿಕ ಸ್ವಾವಲಂಬನೆ ಪಡೆದುಕೊಳ್ಳಬಹುದಾಗಿದೆ. ಗ್ರಾಮೀಣ ಭಾಗದ ಮಹಿಳೆಯರು ತಮ್ಮ ಕುಟುಂಬದ ಆದಾಯವನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸಂಶುನ್ನಿಸ, ಎಫ್‌ಎಲ್‌ಸಿ ಉಮಾ, ಪ್ರಸಾದ್, ದೀಪಿಕಾ, ವಲಯ ಮೇಲ್ವಿಚಾರಕ ನಾಜೀಮ್, ಚೈತ್ರ ಬಣಕಲ್, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಇದ್ದರು.

ಸೋಮವಾರ, ಜೂನ್ 16, 2025

ಗುಂಡಿಗೆ ಬಿದ್ದು ಗಾಯಗೊಂಡಿದ್ದ ಜಿಂಕೆಯ ರಕ್ಷಣೆ

ಉದುಸೆ ಗ್ರಾಮದ ಮನೆಯೊಂದರ ಸಮೀಪ ನಿರ್ಮಾಣ ಹಂತದಲ್ಲಿದ್ದ ಶೌಚಾಲಯದ ಗುಂಡಿಗೆ ಬಿದ್ದು ಗಾಯಗೊಂಡಿದ್ದ ಜಿಂಕೆಯನ್ನು ರಕ್ಷಣೆ ಮಾಡಲಾಯಿತು.
ಉದುಸೆ ಗ್ರಾಮದ ಮನೆಯೊಂದರ ಬಳಿ ನಿರ್ಮಾಣ ಹಂತದಲ್ಲಿದ್ದ ಶೌಚಾಲಯದ ಗುಂಡಿಗೆ ಬಿದ್ದು ಜಿಂಕೆಯೊಂದು ಗಾಯಗೊಂಡಿದ್ದು ಕೂಡಲೇ ಸ್ಥಳೀಯರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ವಲಯ ಅರಣ್ಯಾಧಿಕಾರಿ ಕಾವ್ಯ, ಉಪವಲಯ ಅರಣ್ಯಾಧಿಕಾರಿ ರವಿರಾಜ್ ಜಿಂಕೆಯನ್ನು ರಕ್ಷಣೆ ಮಾಡಿದರು. ಬಣಕಲ್ ಪಶು ಆಸ್ಪತ್ರೆಯ ಪಶು ವೈದ್ಯಾಧಿಕಾರಿ ಡಾ.ಪೂಜಾ ಮತ್ತು ಸಹ ಪಶುವೈದ್ಯರಾದ ಡಾ.ಮಸಿಯಣ್ಣ ಗಾಯಗೊಂಡ ಜಿಂಕೆಗೆ ಚಿಕಿತ್ಸೆ ನೀಡಿದರು. ಚೇತರಿಸಿಕೊಂಡ ಜಿಂಕೆಯನ್ನು ಅರಣ್ಯಕ್ಕೆ ಬಿಡಲಾಯಿತು.
 ಈ ಸಂದರ್ಭದಲ್ಲಿ ಅರಣ್ಯ ಕ್ಷೇಮಾಭಿವೃದ್ದಿ ನೌಕರ ಉದಯ್ ಹಾಗೂ ಗ್ರಾ.ಪಂ ಸದಸ್ಯೆ ಇಂದ್ರಮ್ಮ ರಾಜೇಗೌಡ, ಗ್ರಾಮಸ್ಥ ಮಧು ಮುಂತಾದವರು ಇದ್ದರು.

ಮಂಗಳವಾರ, ಜೂನ್ 10, 2025

ತೇಜಸ್ವಿ ಪ್ರತಿಷ್ಠಾನದಲ್ಲಿ ಮೂಡಿಗೆರೆ ಸಿನಿಮಾಹಬ್ಬ

ಕೊಟ್ಟಿಗೆಹಾರ:ಜಾಗತಿಕ ಸಿನಿಮಾಗಳ ವೀಕ್ಷಣೆಯಿಂದ ಅರಿವನ್ನು ವಿಸ್ತರಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯ ಐವಾನ್ ಡಿಸಿಲ್ವಾ ಹೇಳಿದರು.

ಮನುಜಮತ ಸಿನಿಯಾನ ಮತ್ತು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ವತಿಯಿಂದ ಕೊಟ್ಟಿಗೆಹಾರದ ತೇಜಸ್ವಿ ಪ್ರತಿಷ್ಠಾನದಲ್ಲಿ ಎರಡು ದಿನಗಳ ಕಾಲ ನಡೆದ ಮೂಡಿಗೆರೆ ಸಿನಿಮಾಹಬ್ಬದಲ್ಲಿ ಭಾಗವಹಿಸಿ ಮಾತನಾಡಿದರು.
ಮನುಜಮತ ಸಿನಿಯಾನ ೨೦೧೬ ರಲ್ಲಿ ಜಾಗತಿಕ ಸಿನಿಮಾಗಳ ವೀಕ್ಷಣೆ ಮತ್ತು ಸಂವಾದಕ್ಕಾಗಿ ಹುಟ್ಟಿಕೊಂಡ ಸಿನಿಮಾಸಕ್ತರ ತಂಡ. ಪ್ರತಿ ನಾಲ್ಕು ತಿಂಗಳಿಗೊಮ್ಮೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಸ್ಥಳೀಯ ಸಿನಿಮಾಸಕ್ತರೊಂದಿಗೆ ಸೇರಿಕೊಂಡು ಎರಡು ದಿನಗಳ ನಿರ್ದಿಷ್ಟ ವಿಷಯಾಧಾರಿತ ಸಿನಿಮಾ ಹಬ್ಬಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ದೇಶೀಯ, ಅಂತರಾಷ್ಟೀಯ ಸಿನಿಮಾಗಳ ವೀಕ್ಷಣೆ, ಚರ್ಚೆ ಮತ್ತು ಸಂವಾದವನ್ನು ಏರ್ಪಡಿಸುವುದು, ಈ ಮೂಲಕ ಪ್ರಜ್ಞಾವಂತ ಪ್ರಬುದ್ದ ಸಿನಿಮಾ ವೀಕ್ಷಕರನ್ನು ಸೃಷ್ಟಿಸುವುದು ಮನುಜಮತ ಸಿನಿಯಾನದ ಮುಖ್ಯ ಉದ್ದೇಶವಾಗಿದೆ ಎಂದರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರಾದ ಪ್ರದೀಪ್ ಕೆಂಜಿಗೆ ಮಾತನಾಡಿ, ಸಿನಿಮಾ ಮತ್ತು ನಾಟಕ ಮುಂತಾದ ಚಟುವಟಿಕೆಗಳಿಗೆ ಪೂರಕವಾಗಿರುವ ಸಭಾಂಗಣ ಮತ್ತು ವಸತಿಗೃಹ ನಿರ್ಮಾಣವಾಗುತ್ತಿದ್ದು ಕೆಲ ತಿಂಗಳುಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಸಿನಿಮಾ ಪ್ರದರ್ಶನ, ನಾಟಕ, ವಿಚಾರ ಸಂಕಿರಣ, ಸಂವಾದ, ಕಾರ್ಯಾಗಾರಗಳು ನಿರಂತರವಾಗಿ ನಡೆಯಲಿದೆ ಎಂದರು.
ವನ್ಯಜೀವಿ ಛಾಯಾಗ್ರಾಹಕ ಡಾ.ಲೋಕೇಶ್ ಮೊಸಳೆ ಅವರಿಂದ ಸಿನಿಮಾದಲ್ಲಿ ಧ್ವನಿ ಬೆಳಕು, ಸಿನಿಮಾಟೋಗ್ರಫಿ ಕುರಿತ ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆ ನಡೆಯಿತು. ಅಬ್ಬಾಸ್ ಅಮೀನಿ ನಿರ್ದೇಶನದ ಎಂಡ್ ಲೆಸ್ ಬಾಡರ‍್ಸ್, ಇಂಗ್ಮರ್ ಬರ್ಗ್ ಮೆನ್ ನಿರ್ದೇಶನದ ಶೇಮ್, ಎಲೆಮ್ ಕ್ಲಿಮೋವ್ ನಿರ್ದೇಶನದ ಕಮ್ ಆಂಡ್ ಸೀ ಸಿನಿಮಾ ಹಾಗೂ ಯುವಲ್ ಅವ್ರಹಾಮ್, ಬಾಸೆಲ್ ಅಡ್ರಾ ಮತ್ತು ಹಂದಾನ್ ಬಳ್ಳಾಲ್ ನಿರ್ದೇಶನದ ನೋ ಅದರ್ ಲ್ಯಾಂಡ್ ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಿತು.
ಕಲಾವಿದ ಮತ್ತು ತೇಜಸ್ವಿ ಒಡನಾಡಿ ಬಾಪು ದಿನೇಶ್ ಮಾತನಾಡಿ, ಅಂತರಾಷ್ಟೀಯ ಸಿನಿಮಾಗಳ ವೀಕ್ಷಣೆಯಿಂದ ಆ ನೆಲದ ಜನಜೀವನ, ಸಂಕಷ್ಟ, ರಾಜಕೀಯದ ಚಿತ್ರಣ ನೋಡುಗರ ಎದೆಗೆ ದಾಟುತ್ತದೆ. ಸಿನಿಮಾ ಪರಿಣಾಮಕಾರಿ ಮಾಧ್ಯಮವಾಗಿದ್ದು ಹೊಸ ನೋಟವನ್ನು ನೀಡುತ್ತದೆ ಎಂದರು.
ಸಭಾ ಕಾರ್ಯಕ್ರಮದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯರಾದ ವಿಷ್ಣುಕುಮಾರ್, ದೇಶಾದ್ರಿ ಹೊಸಮನಿ, ಶಿವಮೊಗ್ಗ ಜಿಲ್ಲಾ ವಾರ್ತಾಧಿಕಾರಿ ಭಾಗ್ಯ ಕೆ.ಟಿ, ಕುವೆಂಪು ಭಾಷಾಪ್ರಾಧಿಕಾರದ ಸದಸ್ಯರಾದ ಭಾರತಿ ದೇವಿ, ಸಾಹಿತಿ ಹಾಗೂ ಸಿನಿಮಾ ಚಿತ್ರಕಥಾಕಾರರಾದ ಶಿಲ್ಪ ಕೆ.ಆರ್, ತೇಜಸ್ವಿ ಪ್ರತಿಷ್ಠಾನದ ಸಂಯೋಜಕ ನಂದೀಶ್ ಬಂಕೇನಹಳ್ಳಿ, ಸಿಬ್ಬಂದಿಗಳಾದ ಸತೀಶ್ ತರುವೆ, ಸಂಗೀತಾ, ಕೀಟ ತಜ್ಞರಾದ ಡಾ.ಅವಿನಾಶ್, ಲೇಖಕ ಪೂರ್ಣೇಶ್ ಮತ್ತಾವರ ಮುಂತಾದವರು ಇದ್ದರು.

ಮಂಗಳವಾರ, ಏಪ್ರಿಲ್ 22, 2025

ಬಣಕಲ್ ಸುತ್ತಮುತ್ತ ಭಾರಿ ಗಾಳಿ‌ ಮಳೆ:ಹಾರಿ ಹೋದ ಬಣಕಲ್ ವಿಧ್ಯಾಭಾರತಿ ಶಾಲೆಯ ಮೇಲ್ಛಾವಣಿ

 ಬಣಕಲ್:ಬಣಕಲ್ ಸುತ್ತಮುತ್ತ ಸೋಮವಾರ ರಾತ್ರಿ ಗಾಳಿ ಸಹಿತ ಭಾರಿ ಮಳೆಯಾಗಿದ್ದು ಮಳೆಯಿಂದಾಗಿ ಬಣಕಲ್ ಶ್ರೀವಿದ್ಯಾಭಾರತಿ ಶಾಲೆಯ ಕಬ್ಬಿಣದ ಮೇಲ್ಛಾವಣಿ ಹಾರಿ ಹೋಗಿದೆ.
 ಗಾಳಿ ಮಳೆಯ ತೀವ್ರತೆಯಿಂದಾಗಿ ಮೇಲ್ಛಾವಣಿಯ ಕಬ್ಬಿಣದ ಕಂಬಿಗಳು ಬಾಗಿದ್ದು ಗೋಡೆಗಳು ಬಿರುಕು ಬಿಟ್ಟಿದ್ದೆ. ಅಧೃಷ್ಟವಶಾತ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಸ್ಥಳಕ್ಕೆ ಶಾಲಾ ಸಮಿತಿಯ ಪದಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು
. ಈ ಸಂದರ್ಭದಲ್ಲಿಮಾತನಾಡಿದ ಶಾಲಾ ಸಮಿತಿಯ ಅಧ್ಯಕ್ಷರಾದ ಶಿವರಾಮ ಶೆಟ್ಟಿ ಮಾತನಾಡಿ, ಸಂಸದರ ಅನುದಾನದಲ್ಲಿ ನಿರ್ಮಿಸಲಾಗಿದ್ದ ಮೇಲ್ಛಾವಣಿ  ಗಾಳಿ ಮಳೆಯಿಂದ  ಹಾರಿ ಹೋಗಿ ಸುಮಾರು 4 ಲಕ್ಷ ನಷ್ಟ ಸಂಭವಿಸಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್ ಅವರಿಗೂ ದುರಸ್ತಿ ಮಾಡಿ ಕೊಡುವಂತೇ ಮನವಿ ಮಾಡಲಾಗಿದೆ. ಶಾಲೆಗೆ ರಜೆ ಇದ್ದುದ್ದರಿಂದ ಮತ್ತು ರಾತ್ರಿ ಸಮಯದಲ್ಲಿ ಈ ಘಟನೆ ನಡೆದಿದ್ದುರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.
 ಬಣಕಲ್ ನ ಶ್ರೀವಿದ್ಯಾಭಾರತಿ ಶಾಲೆಯೂ ಹಲವು ವರ್ಷಗಳಿಂದ ಶೇ 100 ಫಲಿತಾಂಶವನ್ನು ಪಡೆದುಕೊಂಡು ಬರುತ್ತಿದೆ. ಶಾಲೆಗೆ ಬರುವ ರಸ್ತೆಯೂ ಸಂಪೂರ್ಣ ಹಾಳಾಗಿದೆ. ಇದೀಗ ಶಾಲಾ ಕಟ್ಟಡದ ಮೇಲ್ಚಾವಣಿಯೂ ಹಾನಿಯಾಗಿದ್ದು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನೆರವಿಗೆ ಬರಬೇಕಿದೆ. ಎಂದರು.
ಈ ಸಂದರ್ಭದಲ್ಲಿ ಶಾಲಾ ಸಮಿತಿಯ ಲಿಂಗಪ್ಪ ಹಾಗೂ ಶಿಕ್ಷಕರು ಇದ್ದರು‌.

ಶುಕ್ರವಾರ, ಏಪ್ರಿಲ್ 18, 2025

ತೇಜಸ್ವಿ ಪ್ರತಿಷ್ಠಾನಕ್ಕೆ ತರೀಕೆರೆ ಶಾಸಕರಾದ ಜಿ.ಹೆಚ್.ಶ್ರೀನಿವಾಸ್ ಭೇಟಿ

 ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನಕ್ಕೆ ತರೀಕೆರೆ ಕ್ಷೇತ್ರದ ಶಾಸಕರಾದ ಜಿ.ಹೆಚ್. ಶ್ರೀನಿವಾಸ್ ಅವರು ಕುಟುಂಬ ಸಮೇತರಾಗಿ ಶುಕ್ರವಾರ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೂಡಿಗೆರೆ ಮಾಯಾವಿ ಎಂದೇ ಹೆಸರುವಾಸಿಯಾದ ತೇಜಸ್ವಿಯವರ ನೆನಪುಗಳನ್ನು, ಅವರ ಆಲೋಚನೆಗಳನ್ನು, ಅವರ ಪರಿಸರದ ಪ್ರೇಮವನ್ನು ಮರುಕಳಿಸುವಂತೆ ಮಾಡಿರುವ ತೇಜಸ್ವಿ  ಪ್ರತಿಷ್ಠಾನದ ಕಾರ್ಯ ಶ್ಲಾಘನೀಯ. ಪ್ರತಿಷ್ಠಾನದಲ್ಲಿ ಕಳೆದ ಕೆಲ ಸಮಯ ತೇಜಸ್ವಿಯವರ ಪುಸ್ತಕಗಳನ್ಜು ಓದಿದ ಸವಿನೆನಪನ್ನು ನೆನಪಿಸಿತು. ಅವರ ಬದುಕಿನ ಚಿತ್ರಣಗಳನ್ನು ಸಂಗ್ರಹಿಸಿರುವ ಪ್ರತಿಷ್ಠಾನದ ಕಾರ್ಯ ಶ್ಲಾಘನೀಯ ಎಂದರು.
ತೇಜಸ್ವಿ ಪ್ರತಿಷ್ಠಾನದ ವಸ್ತು ಸಂಗ್ರಹಾಲಯದಲ್ಲಿರುವ ಹಳೆಯ ಸಾಮಾಗ್ರಿಗಳನ್ನು ಕಂಡು ಬಾಲ್ಯದ ದಿನಗಳು ನೆನಪಾಯಿತು. ಕೀಟ ಸಂಗ್ರಹಾಲಯವೂ ಆಕರ್ಷಣೀಯವಾಗಿತ್ತು. ಮುಖ್ಯಮಂತ್ರಿಗಳು ತೇಜಸ್ವಿ ಪ್ರತಿಷ್ಠಾನಕ್ಕೆ ಈ ಮುಂಚೆ ಅನುದಾನವನ್ನು ನೀಡಿದ್ದರು. ಮುಂದಿನ ದಿನಗಳಲ್ಲಿ ಪ್ರತಿಷ್ಠಾನದ ಅಭಿವೃದ್ದಿಗೆ ಮತ್ತಷ್ಟು ಅನುದಾನ ನೀಡುವಂತೇ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗುವುದು ಎಂದರು.

ಸೋಮವಾರ, ಏಪ್ರಿಲ್ 14, 2025

ಮಹಿಳೆಗೆ ಲೈಂಗಿಕ ಕಿರುಕುಳ ಮತ್ತು ಹಲ್ಲೆ:ಪ್ರಕರಣ ದಾಖಲು

ಮೂಡಿಗೆರೆ: ತಾಲೂಕು ಬಣಕಲ್ ಹೋಬಳಿಯ ಕೊಟ್ಟಿಗೆಹಾರ ಪ್ರದೇಶದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಿನಾಂಕ 12.04.2025 ರಂದು ಸಂಜೆ 6 ಗಂಟೆಯ ಸುಮಾರಿಗೆ ಅಜಾದ್ ನಗರದಲ್ಲಿ ಈ ದುಷ್ಕೃತ್ಯ ನಡೆದಿದೆ. ಈ ಬಗ್ಗೆ ಪೀಡಿತ ಮಹಿಳೆ  ದಿನಾಂಕ 13.04.2025 ರಂದು ರಾತ್ರಿ 11 ಗಂಟೆಗೆ ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ಭೇಟಿ ನೀಡಿ ದೂರು ನೀಡಿದ್ದರು.

ದೂರಿನ ವಿವರಗಳ ಪ್ರಕಾರ, ಆಕೆಯು ಮನೆಯಲ್ಲಿ ಒಬ್ಬಳೇ ಇದ್ದಾಗ, ರಾಮನಗರದ ಅಬ್ಬಾಸ್ ಎಂಬ ವ್ಯಕ್ತಿ ಮನೆಗೆ ಬಂದು ವಾಹನದ ಬಾಡಿಗೆ ಬಾಕಿ ಹಣ 700 ರೂ. ತಕ್ಷಣ ನೀಡುವಂತೆ ಒತ್ತಾಯಿಸಿದ್ದ. ಹಣ ಇಲ್ಲವೆಂದಾಗ, “ಹಣ ಬೇಡ, ನನ್ನ ಜೊತೆ ಮಲಗಿಕೋ” ಎಂದು ಹೇಳಿ ಆಕೆಯ ಬಲಗೈ ಹಿಡಿದು ಎಳೆಯುವ ಪ್ರಯತ್ನ ನಡೆಸಿದ್ದ. ಮಹಿಳೆ ತಪ್ಪಿಸಿಕೊಂಡು ಓಡಿದಾಗ ಆಕೆಯ ಕೂದಲನ್ನು ಹಿಡಿದು ಹೊಟ್ಟೆ ಹಾಗೂ ಸೊಂಟಕ್ಕೆ ಲಾತಿಯಿಂದ ಬಡಿದು ತಳ್ಳಿ ಕೆಳಗೆ ಬೀಳಿಸಿದ್ದಾನೆ. ನಂತರ ಮಹಿಳೆ ತನ್ನ ಮಗಳನ್ನು ಕರೆಸಿದಾಗ, ಮನೆಗೆ ಬಂದ ಮಗಳನ್ನು ಕೂಡ ದೈಹಿಕವಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಸೋಮವಾರ, ಜನವರಿ 6, 2025

ವಸ್ತು ಪ್ರದರ್ಶನದಲ್ಲಿ ಜ್ಞಾನ ವಿಜ್ಞಾನ ಕಲೆಯ ಅನಾವರಣ:ಜಿ.ಪಂ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕೀರ್ತನ ಎಚ್.ಎಸ್ ಅಭಿಮತ


ಎಂಎಲ್‌ಎಂಎನ್ ಬಿಎಡ್ ಕಾಲೇಜು ಆವರಣದಲ್ಲಿ ವಸ್ತು ಪ್ರದರ್ಶನ
ಚಿಕ್ಕಮಗಳೂರು:ಎಂಎಲ್‌ಎಂಎನ್ ಬಿಎಡ್ ಕಾಲೇಜು ಆವರಣದಲ್ಲಿ ನಡೆದ ವಸ್ತು ಪ್ರದರ್ಶನದಲ್ಲಿ ಜ್ಞಾನ ವಿಜ್ಞಾನ ಕಲೆಯ ಅನಾವರಣವಾಗಿದೆ ಎಂದು ಜಿ.ಪಂ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕೀರ್ತನ ಎಚ್.ಎಸ್ ಹೇಳಿದರು.
ನಗರದ ಎಂಎಲ್‌ಎಂಎನ್ ಬಿಎಡ್ ಕಾಲೇಜಿನಲ್ಲಿ ಮಲೆನಾಡು ವಿದ್ಯಾಸಂಸ್ಥೆ, ಎಂಎಲ್‌ಎಂಎನ್ ಬಿಎಡ್ ಕಾಲೇಜು, ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ, ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ೧ ಅರ್ಥ್ ಟ್ರಸ್ಟ್, ಪದವಿ ಪೂರ್ವ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಡೆದ ಜ್ಞಾನ ವಿಜ್ಞಾನ ಕಲಾ ವೈಭವ ವಸ್ತು ಪ್ರದರ್ಶನ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಪುರಾತನ ವಸ್ತುಗಳು ಸಂಸ್ಕೃತಿಯ ಪ್ರತಿಬಿಂಬವಾಗಿದ್ದು ವಿದ್ಯಾರ್ಥಿಗಳು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ವಸ್ತುಗಳನ್ನು ನೋಡಿ ಸುಮ್ಮನಾಗದೇ ವಿದ್ಯಾರ್ಥಿಗಳು ಟಿಪ್ಪಣಿ  ಮಾಡಿಕೊಂಡು ಮತ್ತಷ್ಟು ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕಿದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಸಿ ರಮೇಶ್ ಮಾತನಾಡಿ, ಜ್ಞಾನಾಸಕ್ತರನ್ನು ಕೈ ಬೀಸಿ ಕರೆಯುವ ಈ ವಸ್ತು ಪ್ರದರ್ಶನ ಹಲವು ಕ್ಷೇತ್ರಗಳ ಮಾಹಿತಿ ಅನಾವರಣಕ್ಕೆ ವೇದಿಕೆಯಾಗಿದೆ. ಕೀಟ ಪ್ರಪಂಚ, ಪುರಾತನ ವಸ್ತುಗಳು, ನೂರಾರು ಅಂಚೆ ಚೀಟಿಗಳು, ಲಕೋಟೆಗಳು, ನಾಣ್ಯಗಳು, ನೋಟುಗಳು ಈ ವಸ್ತು ಪ್ರದರ್ಶನದ ವಿಶೇಷವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಲೆನಾಡು ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಡಾ.ಡಿ.ಎಲ್.ವಿಜಯಕುಮಾರ್, ವಸ್ತು ಸಂಗ್ರಹಕಾರರಾದ ಎಂ.ಎಲ್ ಅಶೋಕ್ ಅವರು ಅಪರೂಪದ ಪುರಾತನ ವಸ್ತುಗಳು, ನಾಣ್ಯಗಳು, ಅಂಚೆ ಚೀಟಿಗಳು ಸೇರಿದಂತೇ ಅಪೂರ್ವವಾದ ವಸ್ತು ಸಂಗ್ರಹವನ್ನು ಹೊಂದಿದ್ದಾರೆ. ಜ್ಞಾನದ ಅನಾವರಣಕ್ಕೆ ಈ ಕಾರ್ಯಕ್ರಮ ಪೂರಕವಾಗಿದೆ ಎಂದರು.
ಕೀಟ ಪ್ರದರ್ಶನ, ನಾಣ್ಯ ಮತ್ತು ನೋಟು, ಪುರಾತನ ವಸ್ತುಗಳು ಮತ್ತು ಅಂಚೆ ಚೀಟಿಗಳ ಕೊಠಡಿಗಳ ಉದ್ಘಾಟನೆಯನ್ನು ಮಲೆನಾಡು ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎನ್.ಕೇಶವಮೂರ್ತಿ, ಉಪಾಧ್ಯಕ್ಷರಾದ ಡಾ.ಜೆ.ಪಿ.ಕೃಷ್ಣೆಗೌಡ, ರಾಧಾಸುಂದರೇಶ್ ನೆರವೇರಿಸಿದರು.
ಈ ಸಂದರ್ಭದಲ್ಲಿ ಎಂಎಲ್‌ಎಂಎನ್ ಬಿಎಡ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ ಗಣೇಶ್, ೧ ಅರ್ಥ್ ಟ್ರಸ್ಟ್ ನ  ಅಧ್ಯಕ್ಷರಾದ ಫಣೀಂದ್ರ, ಮ್ಯಾನೇಜಿಂಗ್ ಟ್ರಸ್ಟಿ ಭರತ್ ಸಿ.ವಿ, ಸದಸ್ಯೆ ಚೈತ್ರ, ವಸ್ತು ಸಂಗ್ರಹಕಾರರಾದ ಎಂ.ಎಲ್.ಅಶೋಕ್, ಗ್ರಾರಂಟಿ ಯೋಜನೆಯ ಅಧ್ಯಕ್ಷರಾದ ಶಿವಾನಂದಸ್ವಾಮಿ, ಎಂಇಎಸ್ ಸಂಸ್ಥೆಯ ಸಹಕಾರ್ಯದರ್ಶಿ ಎಸ್.ಎನ್.ಶಂಕರನಾರಾಯಣ ಭಟ್, ಶೈಕ್ಷಣ ಕ ಸಲಹೆಗಾರರಾದ ಮಂಜುನಾಥ್ ಭಟ್,  ಶಿಕ್ಷಣ ಸಂಯೋಜಕರಾದ ಟಿಜಿಕೆ ಅರಸ್, ವ್ಯವಸ್ಥಾಪಕಿ ಲಕ್ಷಿö್ಮ, ಸಹಾಯಕ ಪ್ರಾಧ್ಯಾಪಕರಾದ ಡಾ.ರುದ್ರಪ್ಪ ಎನ್ ತಳವಾರ, ಪ್ರಶಿಕ್ಷಣಾರ್ಥಿ ಪ್ರಿಯಾಂಕ, ರುಕ್ಸಾನ ಎಂ, ಕಾಚೂರ್, ಕೀಟ ತಜ್ಞರಾದ ಡಾ.ಅವಿನಾಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತಾಂತ್ರಿಕ ಸಹಾಯಕ ನವದೀಪ್, ಸಿಬ್ಬಂದಿ ಪೂರ್ಣೇಶ್, ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸಂಯೋಜಕ ನಂದೀಶ್ ಬಂಕೇನಹಳ್ಳಿ, ಸಿಬ್ಬಂದಿ ಸತೀಶ್ ಮುಂತಾದವರು ಇದ್ದರು.


ಜನವರಿ ೮ರವರೆಗೆ ನಡೆಯುವ ವಸ್ತು ಪ್ರದರ್ಶನ
ಜನವರಿ ೬ ರಿಂದ ಆರಂಭವಾಗಿರುವ ವಸ್ತು ಪ್ರದರ್ಶನ ಜನವರಿ ೮ ರವರೆಗೆ ನಡೆಯಲಿದೆ. ನೂರಾರು ಕೀಟಗಳು, ಅಪರೂಪದ ವಸ್ತುಗಳು, ಅಂಚೆಚೀಟಿಗಳು, ಪುರಾತನ ನಾಣ್ಯಗಳು ವಸ್ತು ಪ್ರದರ್ಶನದಲ್ಲಿ ಇರಲಿವೆ. ಬೆಳಿಗ್ಗೆ ೯.೩೦ ರಿಂದ ಸಂಜೆ ೭ ಗಂಟೆಯವರೆಗೆ ವಸ್ತು ಪ್ರದರ್ಶನ ಇರಲಿದ್ದು ಹೆಚ್ಚಿನ ಮಾಹಿತಿಗೆ ೯೪೪೮೫೩೦೫೧೯, ೯೬೬೩೪೦೪೨೯೨, ೯೯೮೬೧೪೦೫೯೭ ಗೆ ಸಂಪರ್ಕಿಸಬಹುದಾಗಿದೆ.

ವಸ್ತು ಪ್ರದರ್ಶನದಲ್ಲಿ ಜ್ಞಾನ ವಿಜ್ಞಾನ ಕಲೆಯ ಅನಾವರಣ

ಚಿಕ್ಕಮಗಳೂರು:ಎಂಎಲ್‌ಎಂಎನ್ ಬಿಎಡ್ ಕಾಲೇಜು ಆವರಣದಲ್ಲಿ ನಡೆದ ವಸ್ತು ಪ್ರದರ್ಶನದಲ್ಲಿ ಜ್ಞಾನ ವಿಜ್ಞಾನ ಕಲೆಯ ಅನಾವರಣವಾಗಿದೆ ಎಂದು ಜಿ.ಪಂ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕೀರ್ತನ ಎಚ್.ಎಸ್ ಹೇಳಿದರು.

ನಗರದ ಎಂಎಲ್‌ಎಂಎನ್ ಬಿಎಡ್ ಕಾಲೇಜಿನಲ್ಲಿ ಮಲೆನಾಡು ವಿದ್ಯಾಸಂಸ್ಥೆ, ಎಂಎಲ್‌ಎಂಎನ್ ಬಿಎಡ್ ಕಾಲೇಜು, ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ, ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ೧ ಅರ್ಥ್ ಟ್ರಸ್ಟ್, ಪದವಿ ಪೂರ್ವ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಡೆದ ಜ್ಞಾನ ವಿಜ್ಞಾನ ಕಲಾ ವೈಭವ ವಸ್ತು ಪ್ರದರ್ಶನ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಪುರಾತನ ವಸ್ತುಗಳು ಸಂಸ್ಕೃತಿಯ ಪ್ರತಿಬಿಂಬವಾಗಿದ್ದು ವಿದ್ಯಾರ್ಥಿಗಳು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ವಸ್ತುಗಳನ್ನು ನೋಡಿ ಸುಮ್ಮನಾಗದೇ ವಿದ್ಯಾರ್ಥಿಗಳು ಟಿಪ್ಪಣ  ಮಾಡಿಕೊಂಡು ಮತ್ತಷ್ಟು ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕಿದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಸಿ ರಮೇಶ್ ಮಾತನಾಡಿ, ಜ್ಞಾನಾಸಕ್ತರನ್ನು ಕೈ ಬೀಸಿ ಕರೆಯುವ ಈ ವಸ್ತು ಪ್ರದರ್ಶನ ಹಲವು ಕ್ಷೇತ್ರಗಳ ಮಾಹಿತಿ ಅನಾವರಣಕ್ಕೆ ವೇದಿಕೆಯಾಗಿದೆ. ಕೀಟ ಪ್ರಪಂಚ, ಪುರಾತನ ವಸ್ತುಗಳು, ನೂರಾರು ಅಂಚೆ ಚೀಟಿಗಳು, ಲಕೋಟೆಗಳು, ನಾಣ್ಯಗಳು, ನೋಟುಗಳು ಈ ವಸ್ತು ಪ್ರದರ್ಶನದ ವಿಶೇಷವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಲೆನಾಡು ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಡಾ.ಡಿ.ಎಲ್.ವಿಜಯಕುಮಾರ್, ವಸ್ತು ಸಂಗ್ರಹಕಾರರಾದ ಎಂ.ಎಲ್ ಅಶೋಕ್ ಅವರು ಅಪರೂಪದ ಪುರಾತನ ವಸ್ತುಗಳು, ನಾಣ್ಯಗಳು, ಅಂಚೆ ಚೀಟಿಳು ಸೇರಿದಂತೇ ಅಪೂರ್ವವಾದ ವಸ್ತು ಸಂಗ್ರಹವನ್ನು ಹೊಂದಿದ್ದಾರೆ. ಜ್ಞಾನದ ಅನಾವರಣಕ್ಕೆ ಈ ಕಾರ್ಯಕ್ರಮ ಪೂರಕವಾಗಿದೆ ಎಂದರು.

ಕೀಟ ಪ್ರದರ್ಶನ, ನಾಣ್ಯ ಮತ್ತು ನೋಟು, ಪುರಾತನ ವಸ್ತುಗಳು ಮತ್ತು ಅಂಚೆ ಚೀಟಿಗಳ ಕೊಠಡಿಗಳ ಉದ್ಘಾಟನೆಯನ್ನು ಮಲೆನಾಡು ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎನ್.ಕೇಶವಮೂರ್ತಿ, ಉಪಾಧ್ಯಕ್ಷರಾದ ಡಾ.ಜೆ.ಪಿ.ಕೃಷ್ಣೆಗೌಡ, ರಾಧಾಸುಂದರೇಶ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಎಂಎಲ್‌ಎಂಎನ್ ಬಿಎಡ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ ಗಣೇಶ್, ೧ ಅರ್ಥ್ ಟ್ರಸ್ಟ್ ನ  ಅಧ್ಯಕ್ಷರಾದ ಫಣೀಂದ್ರ, ಮ್ಯಾನೇಜಿಂಗ್ ಟ್ರಸ್ಟಿ ಭರತ್ ಸಿ.ವಿ, ಸದಸ್ಯೆ ಚೈತ್ರ, ವಸ್ತು ಸಂಗ್ರಹಕಾರರಾದ ಎಂ.ಎಲ್.ಅಶೋಕ್, ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಶಿವಾನಂದಸ್ವಾಮಿ, ಎಂಇಎಸ್ ಸಂಸ್ಥೆಯ ಸಹಕಾರ್ಯದರ್ಶಿ ಎಸ್.ಎನ್.ಶಂಕರನಾರಾಯಣ ಭಟ್, ಶೈಕ್ಷಣ ಕ ಸಲಹೆಗಾರರಾದ ಮಂಜುನಾಥ್ ಭಟ್,  ಶಿಕ್ಷಣ ಸಂಯೋಜಕರಾದ ಟಿಜಿಕೆ ಅರಸ್, ವ್ಯವಸ್ಥಾಪಕಿ ಲಕ್ಷಿö್ಮ, ಸಹಾಯಕ ಪ್ರಾಧ್ಯಾಪಕರಾದ ಡಾ.ರುದ್ರಪ್ಪ ಎನ್ ತಳವಾರ, ಪ್ರಶಿಕ್ಷಣಾರ್ಥಿ ಪ್ರಿಯಾಂಕ, ರುಕ್ಸಾನ ಎಂ, ಕಾಚೂರ್, ಕೀಟ ತಜ್ಞರಾದ ಡಾ.ಅವಿನಾಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತಾಂತ್ರಿಕ ಸಹಾಯಕ ನವದೀಪ್, ಸಿಬ್ಬಂದಿ ಪೂರ್ಣೇಶ್, ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸಂಯೋಜಕ ನಂದೀಶ್ ಬಂಕೇನಹಳ್ಳಿ, ಸಿಬ್ಬಂದಿ ಸತೀಶ್ ಮುಂತಾದವರು ಇದ್ದರು.

ಜನವರಿ ೮ರವರೆಗೆ ನಡೆಯುವ ವಸ್ತು ಪ್ರದರ್ಶನ


ಜನವರಿ ೬ ರಿಂದ ಆರಂಭವಾಗಿರುವ ವಸ್ತು ಪ್ರದರ್ಶನ ಜನವರಿ ೮ ರವರೆಗೆ ನಡೆಯಲಿದೆ. ನೂರಾರು ಕೀಟಗಳು, ಅಪರೂಪದ ವಸ್ತುಗಳು, ಅಂಚೆಚೀಟಿಗಳು, ಪುರಾತನ ನಾಣ್ಯಗಳು ವಸ್ತು ಪ್ರದರ್ಶನದಲ್ಲಿ ಇರಲಿವೆ. ಬೆಳಿಗ್ಗೆ ೯.೩೦ ರಿಂದ ಸಂಜೆ ೭ ಗಂಟೆಯವರೆಗೆ ವಸ್ತು ಪ್ರದರ್ಶನ ಇರಲಿದ್ದು ಹೆಚ್ಚಿನ ಮಾಹಿತಿಗೆ ೯೪೪೮೫೩೦೫೧೯, ೯೬೬೩೪೦೪೨೯೨, ೯೯೮೬೧೪೦೫೯೭ ಗೆ ಸಂಪರ್ಕಿಸಬಹುದಾಗಿದೆ.