ಬುಧವಾರ, ಜೂನ್ 25, 2025

ವನ್ ಧನ್ ವಿಕಾಸ ಕೇಂದ್ರದ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ


ಬಣಕಲ್:ವನ್ ಧನ್ ವಿಕಾಸ ಕೇಂದ್ರದ ಸೌಲಭ್ಯಗಳ ಸದುಪಯೋಗ ಪಡೆದುಕೊಂಡು ಸ್ವಾವಲಂಭಿ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಎನ್‌ಆರ್‌ಎಲ್‌ಎಂನ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಶಾಲಿನಿ ಹೇಳಿದರು.
ಬಣಕಲ್ ಗ್ರಾ.ಪಂ ಸಭಾಂಗಣದಲ್ಲಿ ನಡೆದ ವಿಡಿವಿಕೆ ಮತ್ತು ಎಂಬ್ರಾಯಿಡರಿ ತರಬೇತಿ ಕುರಿತ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಗ್ರಾಮೀಣ ಮಹಿಳೆಯರ ಆರ್ಥಿಕ ಅಭಿವೃದ್ದಿ ಹಾಗೂ ಅರಣ್ಯ ಉತ್ಪನ್ನಗಳ ಮೌಲ್ಯವರ್ಧನೆಗಾಗಿ ಕೇಂದ್ರ ಸರ್ಕಾರದ ದೀನದಯಾಳ್ ಅಂತ್ಯೋದಯ ಯೋಜನೆಯ ರಾಷ್ಟೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಅಡಿಯಲ್ಲಿ ವನ್ ಧನ್ ವಿಕಾಸ್ ಕೇಂದ್ರಗಳು ಸ್ಥಾಪನೆಯಾಗಿವೆ. ಈ ಯೋಜನೆಯು ಮಹಿಳಾ ಸ್ವಸಹಾಯ ಗುಂಪುಗಳ ಮೂಲಕ ಪ್ರಾದೇಶಿಕ ಅರಣ್ಯ ಉತ್ಪನ್ನಗಳ ಸಂಗ್ರಹ, ಸಂಸ್ಕರಣೆ, ಪ್ಯಾಕೇಜಿಂಗ್ ಮತ್ತು ಮಾರಾಟಕ್ಕೆ ಅವಕಾಶ ನೀಡುತ್ತದೆ ಎಂದರು.
ಪಿಡಿಓ ಕೃಷ್ಣಪ್ಪ ಮಾತನಾಡಿ ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಂಡು ಮಹಿಳೆಯರು ಆರ್ಥಿಕ ಸ್ವಾವಲಂಬನೆ ಪಡೆದುಕೊಳ್ಳಬಹುದಾಗಿದೆ. ಗ್ರಾಮೀಣ ಭಾಗದ ಮಹಿಳೆಯರು ತಮ್ಮ ಕುಟುಂಬದ ಆದಾಯವನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸಂಶುನ್ನಿಸ, ಎಫ್‌ಎಲ್‌ಸಿ ಉಮಾ, ಪ್ರಸಾದ್, ದೀಪಿಕಾ, ವಲಯ ಮೇಲ್ವಿಚಾರಕ ನಾಜೀಮ್, ಚೈತ್ರ ಬಣಕಲ್, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಇದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ