ಕೊಟ್ಟಿಗೆಹಾರ:ಸ್ವಾತಂತ್ರ್ಯ ತಂದು ಕೊಡಲು ಶ್ರಮಿಸಿದ ಸಾವಿರಾರು ಹೋರಾಟಗಾರರ ತ್ಯಾಗ ಬಲಿದಾನವನ್ನು ಸ್ಮರಿಸಬೇಕಿದೆ ಎಂದು ಬಣಕಲ್ ಪ್ರೌಢಶಾಲೆಯ ಮುಖ್ಯಶಿಕ್ಷಕ ಶ್ರೀನಿವಾಸ್ ಹೇಳಿದರು.
ಬಣಕಲ್ನ ಶ್ರಮಜೀವಿ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ನಡೆದ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಿಜ ಅರ್ಥದಲ್ಲಿ ಪೂರ್ಣ ಸ್ವಾತಂತ್ರ ಇನ್ನೂ ಸಿಕ್ಕಿಲ್ಲ. ಎಲ್ಲರಿಗೂ ಸಮನಾಗಿ ಸ್ವಾತಂತ್ರ್ಯವೂ ಸಿಗುವಂತಾಗಬೇಕಿದೆ. ರಾಷ್ಟ್ರೀಯ ಹಬ್ಬಗಳ ಆಚರಣೆ ಮಕ್ಕಳು ಸೇರಿದಂತೇ ಎಲ್ಲರಲ್ಲೂ ದೇಶಾಭಿಮಾನವನ್ನು ಹೆಚ್ಚಿಸಲು ವೇದಿಕೆಯಾಗಿದೆ ಎಂದರು.
ದಾನಿಗಳಾದ ಬಿ.ಎನ್.ದಿವ್ಯಪ್ರಸಾದ್ ಧ್ವಜರೋಹಣ ನೆರವೇರಿಸಿದರು.
ಸಾಧಕರಾದ ಹಿಲಾರಿ ಜೋಸೆಫ್, ನಂದೀಶ್ ಬಂಕೇನಹಳ್ಳಿ, ಸೂರಿ ಬಣಕಲ್, ಮಾನವಿ ಬಗ್ಗಸಗೋಡು, ಶೇಖರ್ ಸಬ್ಲಿ ಮತ್ತು ದಾನಿಗಳಾದ ಬಿ.ಎನ್.ದೀಪಕ್, ಬಿ.ಎನ್.ದಿವ್ಯಪ್ರಸಾದ್ ಅವರನ್ನು ಸನ್ಮಾನಿಸಲಾಯಿತು.
ಸ್ವಾತಂತ್ರ ದಿನಾಚರಣೆ ಅಂಗವಾಗಿ ಆಟೋಗಳನ್ನು ಆಕರ್ಷಕವಾಗಿ ಸಿಂಗರಿಸಲಾಯಿತು. ಬಣಕಲ್ ಪ್ರೌಢಶಾಲೆ ಮತ್ತು ರಿವರ್ ವ್ಯೂವ್ ಶಾಲೆಯ ವಿದ್ಯಾರ್ಥಿಗಳು ಬಣಕಲ್ ಮುಖ್ಯ ರಸ್ತೆಯಲ್ಲಿ ಮೆರವಣ ಗೆ ನಡೆಸಿದರು.
ಈ ಸಂದರ್ಭದಲ್ಲಿ ಶ್ರಮಜೀವಿ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಸುರೇಶ್, ಗೌರವ ಅಧ್ಯಕ್ಷರಾದ ಸಬ್ಲಿ ದೇವರಾಜ್ ಹಾಗೂ ಪದಾಧಿಕಾರಿಗಳು ಇದ್ದರು.
ವಿವಿಧೆಡೆ ಸಂಭ್ರಮದ ಸ್ವಾತಂತ್ರ ದಿನಾಚರಣೆ: ಬಣಕಲ್ನಲ್ಲಿ ವಿವಿದೆಡೆ ಸ್ವಾತಂತ್ರ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಬಣಕಲ್ ಗ್ರಾ.ಪಂಯಲ್ಲಿ ಅಧ್ಯಕ್ಷರಾದ ಜರೀನಾ, ವಿದ್ಯಾಭಾರತಿ ಶಾಲೆಯಲ್ಲಿ ಸವಿತಾ ಸಮಾಜದ ಅಧ್ಯಕ್ಷ ಹರೀಶ್ ಫಲ್ಗುಣ , ಬಣಕಲ್ ಪ್ರೌಢಶಾಲೆಯಲ್ಲಿ ಕೋಶಾಧಿಕಾರಿ ಬಿ.ಕೆ.ಪೃಥ್ವಿ, ನಜರೆತ್ ಶಾಲೆಯಲ್ಲಿ ಪೋಷಕರಾದ ಭವ್ಯಾಭಟ್ ನೆರವೇರಿಸಿದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ