ಸೋಮವಾರ, ಜೂನ್ 16, 2025

ಗುಂಡಿಗೆ ಬಿದ್ದು ಗಾಯಗೊಂಡಿದ್ದ ಜಿಂಕೆಯ ರಕ್ಷಣೆ

ಉದುಸೆ ಗ್ರಾಮದ ಮನೆಯೊಂದರ ಸಮೀಪ ನಿರ್ಮಾಣ ಹಂತದಲ್ಲಿದ್ದ ಶೌಚಾಲಯದ ಗುಂಡಿಗೆ ಬಿದ್ದು ಗಾಯಗೊಂಡಿದ್ದ ಜಿಂಕೆಯನ್ನು ರಕ್ಷಣೆ ಮಾಡಲಾಯಿತು.
ಉದುಸೆ ಗ್ರಾಮದ ಮನೆಯೊಂದರ ಬಳಿ ನಿರ್ಮಾಣ ಹಂತದಲ್ಲಿದ್ದ ಶೌಚಾಲಯದ ಗುಂಡಿಗೆ ಬಿದ್ದು ಜಿಂಕೆಯೊಂದು ಗಾಯಗೊಂಡಿದ್ದು ಕೂಡಲೇ ಸ್ಥಳೀಯರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ವಲಯ ಅರಣ್ಯಾಧಿಕಾರಿ ಕಾವ್ಯ, ಉಪವಲಯ ಅರಣ್ಯಾಧಿಕಾರಿ ರವಿರಾಜ್ ಜಿಂಕೆಯನ್ನು ರಕ್ಷಣೆ ಮಾಡಿದರು. ಬಣಕಲ್ ಪಶು ಆಸ್ಪತ್ರೆಯ ಪಶು ವೈದ್ಯಾಧಿಕಾರಿ ಡಾ.ಪೂಜಾ ಮತ್ತು ಸಹ ಪಶುವೈದ್ಯರಾದ ಡಾ.ಮಸಿಯಣ್ಣ ಗಾಯಗೊಂಡ ಜಿಂಕೆಗೆ ಚಿಕಿತ್ಸೆ ನೀಡಿದರು. ಚೇತರಿಸಿಕೊಂಡ ಜಿಂಕೆಯನ್ನು ಅರಣ್ಯಕ್ಕೆ ಬಿಡಲಾಯಿತು.
 ಈ ಸಂದರ್ಭದಲ್ಲಿ ಅರಣ್ಯ ಕ್ಷೇಮಾಭಿವೃದ್ದಿ ನೌಕರ ಉದಯ್ ಹಾಗೂ ಗ್ರಾ.ಪಂ ಸದಸ್ಯೆ ಇಂದ್ರಮ್ಮ ರಾಜೇಗೌಡ, ಗ್ರಾಮಸ್ಥ ಮಧು ಮುಂತಾದವರು ಇದ್ದರು.