ಗುರುವಾರ, ಮಾರ್ಚ್ 26, 2026

ಡಾ.ಪ್ರದೀಪ್ ಕೆಂಜಿಗೆ ಅವರ ಕೃತಿಗೆ ಕನ್ನಡ ಸಾಹಿತ್ಯ ಅಕಾಡೆಮಿ ಅತ್ಯುತ್ತಮ ಪುಸ್ತಕ ಪ್ರಶಸ್ತಿ


ಕೊಟ್ಟಿಗೆಹಾರ:ಲೇಖಕರಾದ ಡಾ.ಪ್ರದೀಪ್ ಕೆಂಜಿಗೆ ಅವರ ನರವಾನರ ಕೃತಿಗೆ ಕನ್ನಡ ಸಾಹಿತ್ಯ ಅಕಾಡೆಮಿಯಿಂದ ಕೊಡಮಾಡುವ ಅತ್ಯುತ್ತಮ ಪುಸ್ತಕ ಪ್ರಶಸ್ತಿ ದೊರೆತಿದೆ.
2024ರಲ್ಲಿ ಪ್ರಕಟವಾದ ವಿವಿಧ 17 ಸಾಹಿತ್ಯ ಪ್ರಕಾರದ ಕೃತಿಗಳಿಗೆ ವಿಮರ್ಶಕರ ಅಭಿಪ್ರಾಯಗಳನ್ನು ಆಧರಿಸಿ ಅತ್ಯುತ್ತಮ ಕೃತಿಗಳೆಂದು ಪರಿಗಣಿಸಿ ಆಯ್ಕೆ ಮಾಡಲಾಗಿದ್ದು ಸಂಕೀರ್ಣ ಪ್ರಕಾರದಲ್ಲಿ ಡಾ.ಪ್ರದೀಪ್ ಕೆಂಜಿಗೆ ಅವರ ನರವಾನರ ಕೃತಿಗೆ ಅತ್ಯುತ್ತಮ ಪುಸ್ತಕ ಪ್ರಶಸ್ತಿ ದೊರೆತಿದೆ. ಪ್ರಶಸ್ತಿ 25 ಸಾವಿರ ನಗದು ಬಹುಮಾನ, ಫಲಕ ಪ್ರಮಾಣ ಪತ್ರವನ್ನು ಒಳಗೊಂಡಿದೆ.
ನರವಾನರ ಕೃತಿ ಚಿಂಪಾAಜಿಗಳ ನಡವಳಿಕೆ, ಜೀವನವಿಧಾನ ಮುಂತಾದವುಗಳನ್ನು ವಿಶ್ಲೇಷಿಸುವ ವೈಜ್ಞಾನಿಕ ಕೃತಿಯಾಗಿದ್ದು ಜೀವ ವಿಜ್ಞಾನದ ಸಂಶೋಧನೆಗಳನ್ನು, ಹಲವಾರು ವಿಸ್ಮಯಕಾರಿ ಸಂಗತಿಗಳನ್ನು ಮನಮುಟ್ಟುವಂತೇ ಈ ಕೃತಿಯಲ್ಲಿ ಕಟ್ಟಿಕೊಟ್ಟಿದ್ದಾರೆ.
 ಡಾ.ಪ್ರದೀಪ್ ಕೆಂಜಿಗೆ ಅವರು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರೊಡನೆ ಪ್ಯಾಪಿಲಾನ್ 1. 2, ವಿಸ್ಮಯ 1 2 3 ಕೃತಿಗಳನ್ನು ರಚಿಸಿದ್ದು ಪ್ಯಾಪಿಯೋನ್ 3, ಬರ್ಮುಡಾ ಟ್ರೆöÊಂಗಲ್, ಅದ್ಭುತಯಾನ, ಹೆಬ್ಬಾವಿನೊಡನೆ ಹೋರಾಟ ಕೃತಿಯನ್ನು ಸಹ ಪ್ರಕಟಿಸಿದ್ದಾರೆ. ಪಶ್ಚಿಮ ಘಟ್ಟಗಳ ಜೀವ ವೈವಿಧ್ಯತೆ ಹಾಗೂ ಅದರ ಮೇಲೆ ಕ್ರಿಮಿನಾಶಕಗಳ ದುಷ್ಪರಿಣಾಮಗಳ ಅಧ್ಯಯನದಲ್ಲಿ ಪಿಎಚ್‌ಡಿ ಪಡೆದಿದ್ದಾರೆ. ಕೆಫೆ ಕಾಫಿ ಡೇಯಲ್ಲಿ ಸಂಶೋಧನಾ ಮತ್ತು ಅಭಿವೃದ್ದಿ ವಿಭಾಗದ ಮುಖ್ಯ ವಿಜ್ಞಾನಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷರಾಗಿದ್ದಾರೆ.

ಗುರುವಾರ, ಮಾರ್ಚ್ 12, 2026

ರಂಗ ಪ್ರಯೋಗ ಕಲಾವಿದರಿಂದ ಅರ್ಜಿ ಆಹ್ವಾನ

ಚಿಕ್ಕಮಗಳೂರು:ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ಪ್ರದರ್ಶಿಸಲು ಉದ್ದೇಶಿಸಿರುವ ವಚನ ಕಲ್ಯಾಣ ರಂಗ ಪ್ರಯೋಗಕ್ಕೆ ರಂಗ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಚಿಕ್ಕಮಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಸಿ ರಮೇಶ್ ತಿಳಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ೯ ಗಂಟೆಗಳ ವಚನ ಕಲ್ಯಾಣ ಎಂಬ ಅಹೋರಾತ್ರಿ  ನಾಟಕ ಸಿದ್ದಪಡಿಸಿ ನಾಡಿನಾದ್ಯಂತ ಪ್ರದರ್ಶಿಸಲು ಉದ್ದೇಶಿಸಲಾಗಿದ್ದು ಆಸಕ್ತ ಯುವಕ, ಯುವತಿಯರು ಹಾಗೂ ಅನುಭವಿ ರಂಗ ಕಲಾವಿದರು ಮತ್ತು ಗಾಯಕರಿಂದ ಅರ್ಜಿ ಆಹ್ವಾನಿಸಲಾಗಿದೆ. ೧೮ ರಿಂದ ೪೦ ವರ್ಷದೊಳಗಿನ ರಂಗಶಿಕ್ಷಣದಲ್ಲಿ ತರಬೇತಿ ಪಡೆದ ಹಾಗೂ ನಾಟಕಗಳಲ್ಲಿ ಅಭಿನಯಿಸಿದ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಮಾ.೨೦ರೊಳಗೆ ಸದಸ್ಯ ಕಾರ್ಯದರ್ಶಿ, ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ ಬೆಂಗಳೂರು-೫೬೦೦೫೬ ಇಲ್ಲಿಗೆ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.