ತರಿಮಲೆಯಲ್ಲಿ ವಿಜೃಂಭಣೆಯಿಂದ ನಡೆದ ಕಲಾವಳಿ ಉತ್ಸವ
ಕೊಟ್ಟಿಗೆಹಾರ:ತರುವೆ ಸಮೀಪದ ಆದಿಸ್ಥಾನ ತರಿಮಲೆಯಲ್ಲಿ ವಾರ್ಷಿಕ ಕಲಾವಳಿ ಉತ್ಸವ ವಿಜೃಂಭಣೆಯಿಂದ ನಡೆಯಿತು.
ಕೊಟ್ಟಿಗೆಹಾರ:ತರುವೆ ಸಮೀಪದ ಆದಿಸ್ಥಾನ ತರಿಮಲೆಯಲ್ಲಿ ವಾರ್ಷಿಕ ಕಲಾವಳಿ ಉತ್ಸವ ವಿಜೃಂಭಣೆಯಿಂದ ನಡೆಯಿತು.
ಉತ್ಸವದ ಅಂಗವಾಗಿ ಆದಿಸ್ಥಾನವನ್ನು ತಳಿರು ತೋರಣ ಪುಷ್ಪಾಲಂಕಾರಗಳಿಂದ ಸಿಂಗರಿಸಲಾಗಿತ್ತು. ಭಕ್ತಾದಿಗಳು ಹಣ್ಣು ಕಾಯಿ ಹಾಗೂ ಹರಕೆಯನ್ನು ದೇವರಿಗೆ ಅರ್ಪಿಸಿ ದೇವರ ದರ್ಶನ ಪಡೆದರು. ೧೨ ಪ್ರಧಾನ ದೇವತೆಗಳಿಗೆ ಎಡೆ ಅರ್ಪಿಸಿ ೧೦೧ ದೈವಗಳಿಗೆ ಪಂಜಿನ ದೀಪವನ್ನು ಬೆಳಗಲಾಯಿತು. ಏಪ್ರಿಲ್ ೧೪ ರಿಂದ ಉತ್ಸವ ಪ್ರಾರಂಭವಾಗಿದ್ದು ಶ್ರೀಚೌಡೇಶ್ವರಿ ದೇವಸ್ಥಾನದಲ್ಲಿ ಕಲಾಹೋಮ, ಕಲಶ ಪೂಜೆ, ಪಟ್ಟದಾರಣೆ ಪೂಜೆ, ಕುಂಕುಮಾರ್ಚನೆ, ಹೂವಿನ ಪೂಜೆ, ನೈವೇದ್ಯ ಪೂಜೆ, ದೀಪಾರಾಧನೆ ಪೂಜೆ, ಮಹಾ ಮಂಗಳಾರತಿ, ಹಣ್ಣುಕಾಯಿ ಪ್ರಸಾದ ವಿನಿಯೋಗ ನಡೆಯಿತು. ತರುವೆ, ಕೊಟ್ಟಿಗೆಹಾರ, ಬೆಂಗಳೂರು, ಹಾಸನ, ಶಿವಮೊಗ್ಗ, ಬಳ್ಳಾರಿ, ಮೈಸೂರು ಸೇರಿದಂತೇ ವಿವಿದೆಡೆಯಿಂದ ನೂರಾರು ಭಕ್ತಾಧಿಗಳು ಆಗಮಿಸಿದ್ದರು. ಪೂಜಾ ವಿಧಿವಿಧಾನಗಳು ವಿಜೃಂಭಣೆಯಿಂದ ಶಾಸ್ತ್ರೋಕ್ತವಾಗಿ ನಡೆಯಿತು. ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷರಾದ ಟಿ.ಎಂ ರಾಮಚಂದ್ರಗೌಡ ಹಾಗೂ ಪದಾಧಿಕಾರಿಗಳು ಇದ್ದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ